Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:40 - ಕನ್ನಡ ಸತ್ಯವೇದವು C.L. Bible (BSI)

40 ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಬಲಿಪೀಠದ ಮೇಲೆ ಪ್ರತೀದಿನ ಮುಂಜಾನೆ ಹಾಗು ಸಂಜೆ ದಹನಬಲಿಯರ್ಪಿಸಬೇಕಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವರು ಪ್ರತಿದಿನವೂ ಪ್ರಾತಃಕಾಲಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲ್ಯರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೆಹೋವ ದೇವರು ಇಸ್ರಾಯೇಲಿಗೆ ಆಜ್ಞಾಪಿಸಿದ ಮೋಶೆಯ ನಿಯಮದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡಲೂ ಅವರು ಪ್ರತಿದಿನವೂ ಉದಯಕಾಲದಲ್ಲಿ ಮತ್ತು ಸಾಯಂಕಾಲದಲ್ಲಿ ದಹನಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:40
11 ತಿಳಿವುಗಳ ಹೋಲಿಕೆ  

ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.


ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:


ಸುತ್ತಮುತ್ತಲಿನ ಜನರಿಗೆ ಅವರು ಹೆದರಿದರು. ಈ ಕಾರಣ ಪೀಠವನ್ನು ಅದರ ಸ್ಥಳದಲ್ಲೇ ಕಟ್ಟಿ, ಅದರ ಮೇಲೆ ಸರ್ವೇಶ್ವರನಿಗೆ, ಬೆಳಿಗ್ಗೆ ಹಾಗು ಸಂಜೆ ವೇಳೆಯ ದಹನಬಲಿ ದಾನಗಳನ್ನು ಅರ್ಪಿಸಿದರು.


ಇದಲ್ಲದೆ, ಅವನು ಸರ್ವೇಶ್ವರನ ಧರ್ಮಶಾಸ್ತ್ರ ವಿಧಿಗನುಸಾರ ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗು ಜಾತ್ರೆಗಳಲ್ಲಿ ಸಮರ್ಪಣೆ ಆಗತಕ್ಕ ದಹನ ಬಲಿಗಳಿಗೆ ಬೇಕಾದುದನ್ನೆಲ್ಲಾ ತನ್ನ ಆಸ್ತಿಯಿಂದಲೇ ಸಲ್ಲಿಸಲಾಗುವುದೆಂದು ಸೂಚಿಸಿದನು.


ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.


ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ಜನರು ತಂದ ನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬೆಳಿಗ್ಗೆಯ ದಹನಬಲಿಯ ಜೊತೆಗೆ ಅದನ್ನು ಪೀಠದ ಮೇಲೆ ಹೋಮಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು