41-42 ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು.
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.
ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.
ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.
ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.
ಹಾಗು ದಾವೀದನೂ ಅವನ ಸರದಾರರೂ ಲೇವಿಯರ ಸಹಾಯಕ್ಕಾಗಿ ಕೊಟ್ಟ ದೇವಸ್ಥಾನ ಪರಿಚಾರಕರಲ್ಲಿ ಇನ್ನೂರ ಇಪ್ಪತ್ತು ಮಂದಿಯನ್ನು ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.
ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು.
ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು.
ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.