Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:17 - ಕನ್ನಡ ಸತ್ಯವೇದವು C.L. Bible (BSI)

17 ದೇವರೇ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹುದೂರ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ದೇವರೇ, ಸರ್ವೇಶ್ವರಾ, ನೀವು ನನ್ನನ್ನು ಒಬ್ಬ ಮಹಾನ್ ವ್ಯಕ್ತಿಯನ್ನೋ ಎಂಬಂತೆ ಭಾವಿಸಿದಿರಿ; ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದು ಸಾಲದೆಂದೆಣಿಸಿ ನಿನ್ನ ಸೇವಕನ ಬಹುದೂರ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿದಿ. ದೇವರೇ, ಯೆಹೋವನೇ, ನೀನು ನನ್ನನ್ನು ಕುಲೀನನನ್ನೋ ಎಂಬಂತೆ ಕಟಾಕ್ಷಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ವಂಶದವರ ವಿಷಯದಲ್ಲಿಯೂ ನೀನು ವಾಗ್ದಾನ ಮಾಡಿರುವೆ. ದೇವರೇ, ಯೆಹೋವನೇ, ನೀನು ನನ್ನನ್ನು ಒಬ್ಬ ಮಹಾವ್ಯಕ್ತಿಯೋ ಎಂಬಂತೆ ಪರಿಗಣಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:17
13 ತಿಳಿವುಗಳ ಹೋಲಿಕೆ  

ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಅವರು ತಮ್ಮ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯ ಮಾತ್ರವಲ್ಲ, ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವರು.


ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ.


ಇದಲ್ಲದೆ, ನಾನು ನಿನಗೆ ನಿನ್ನ ಯಜಮಾನನ ಮನೆಯನ್ನೂ ಅವನ ಮಡದಿಯರನ್ನೂ ನಿನ್ನ ಮಡಿಲಿಗೆ ಹಾಕಿದೆ. ಇಸ್ರಯೇಲ್ ಮತ್ತು ಯೆಹೂದ ಕುಲಗಳನ್ನು ನಿನ್ನ ವಶಕ್ಕೆ ಕೊಟ್ಟೆ. ಇದೂ ಸಾಲದಿದ್ದರೆ, ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆ.


ಸರ್ವೇಶ್ವರಾ, ಸರ್ವೆಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!


ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!


ನೀವು ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ನನ್ನ ಘನತೆಯನ್ನು ಕುರಿತು ಇನ್ನೇನು ಹೇಳಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು