Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:24 - ಕನ್ನಡ ಸತ್ಯವೇದವು C.L. Bible (BSI)

24 ‘ಸರ್ವಶಕ್ತರಾದ ಸರ್ವೇಶ್ವರ, ಇಸ್ರಯೇಲರ ದೇವರು; ತಮ್ಮ ದಾಸ ದಾವೀದನ ಮನೆತನವನ್ನು ತಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿಟ್ಟಿದ್ದಾರೆ’ ಎಂದು ಜನರು ನಿಮ್ಮ ನಾಮವನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜನರು ‘ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ’ ಎಂದು ನಿನ್ನ ನಾಮವನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 [ಜನರು -] ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್‍ದೇವರೂ ಇಸ್ರಾಯೇಲ್ಯರ ಶರಣನೂ ಆಗಿದ್ದಾನೆ, ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ ಎಂದು ನಿನ್ನ ನಾಮವನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿನ್ನ ವಾಗ್ದಾನವನ್ನು ನೆರವೇರಿಸು. ಆಗ ಜನರು, ‘ಸರ್ವಶಕ್ತನಾದ ಯೆಹೋವನು ಇಸ್ರೇಲರ ದೇವರೂ ರಕ್ಷಕನೂ ಆಗಿದ್ದಾನೆ’ ಎಂದು ಹೇಳುವರು. ನಾನು ನಿನ್ನ ಸೇವಕನಾಗಿದ್ದೇನೆ. ನನ್ನ ಕುಟುಂಬವು ಬಲಿಷ್ಠವಾಗಿದ್ದು ನಿನ್ನ ಸೇವೆಯನ್ನು ಮುಂದುವರಿಸುವಂತೆ ಕೃಪೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲ್ ದೇವರಾಗಿದ್ದಾರೆಂದು ನಿಮ್ಮ ನಾಮವು ಶಾಶ್ವತವಾಗಿ ಘನಪಡಲಿ,’ ಎಂದು ಜನರು ಹೇಳಲಿ. ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:24
17 ತಿಳಿವುಗಳ ಹೋಲಿಕೆ  

ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ಸರ್ವೇಶ್ವರಾ, ನೀವು ಅವರಿಗೆ ದೇವರಾದಿರಿ. ಸರ್ವೇಶ್ವರಾ, ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ನೀವು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ, ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.


ನನ್ನ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.


ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು