Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:7 - ಕನ್ನಡ ಸತ್ಯವೇದವು C.L. Bible (BSI)

7 “ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೇಳಿದೆನೆಂದು ಹೀಗೆ ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನನ್ನ ಸೇವಕನಾದ ದಾವೀದನಿಗೆ ಹೇಳು: ಸರ್ವಶಕ್ತನಾದ ದೇವರು ಹೀಗೆನ್ನುತ್ತಾನೆ: ‘ಕುರಿಗಳನ್ನು ಮೇಯಿಸುತ್ತಿದ್ದ ನಿನ್ನನ್ನು ನಾನು ಆರಿಸಿಕೊಂಡೆನು; ನನ್ನ ಜನರಾದ ಇಸ್ರೇಲರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:7
13 ತಿಳಿವುಗಳ ಹೋಲಿಕೆ  

ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು.


ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”


ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು