11 ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.
11 ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”
ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.
ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.
ಜುದೇಯದ ಅರಸ ಯೆಹೋವಾಷನು ಇದನ್ನು ಕೇಳಿ, ತಾನು ಮತ್ತು ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯಾ ಎಂಬ ಯೆಹೂದರಾಜರು ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳನ್ನು ಹಾಗು ಸರ್ವೇಶ್ವರನ ಆಲಯದ ಮತ್ತು ಅರಮನೆ ಭಂಡಾರಗಳಲ್ಲಿ ಇದ್ದ ಬಂಗಾರದ ವಸ್ತುಗಳನ್ನು ಸಿರಿಯಾದವರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಜೆರುಸಲೇಮನ್ನು ಬಿಟ್ಟುಹೋದನು.
ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.
ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು? ಎಲ್ಲಿಯವನು?” ಎಂದು ಕೇಳಿದನು. ಆಗ ಅವನು, “ನಾನು ಈಜಿಪ್ಟಿನವನು; ಒಬ್ಬ ಅಮಾಲೇಕ್ಯನ ಗುಲಾಮನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದ್ದರಿಂದ ನನ್ನ ಯಜಮಾನ ನನ್ನನ್ನು ಬಿಟ್ಟುಹೋದನು.
(ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.