Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:17 - ಕನ್ನಡ ಸತ್ಯವೇದವು C.L. Bible (BSI)

17 ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿ, ಸಿರಿಯಾದವರ ಸಮೀಪಕ್ಕೆ ಬಂದು, ಅವರೊಡನೆ ಕಾಳಗ ನಡೆಸಲು ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲ್ಯರೆಲ್ಲರನ್ನೂ ಕೂಡಿಸಿಕೊಂಡು ಯೊರ್ದನ್‍ಹೊಳೆ ದಾಟಿ ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದುವದಕ್ಕೋಸ್ಕರ ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅರಾಮ್ಯರು ಯುದ್ಧಕ್ಕೆ ಜನಕೂಡಿಸುತ್ತಾರೆಂಬ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರೇಲ್ ಸೈನ್ಯವನ್ನು ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಅರಾಮ್ಯರೊಂದಿಗೆ ಯುದ್ಧಮಾಡಿದನು. ಯುದ್ಧಸನ್ನದ್ಧರಾಗಿ ಕಾಳಗವನ್ನು ಆರಂಭಿಸಿಯೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ, ಅವರಿಗೆದುರಾಗಿ ವ್ಯೂಹ ಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹ ಕಟ್ಟಿದ ಮೇಲೆ, ಅವರು ಅವನ ವಿರುದ್ಧ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:17
5 ತಿಳಿವುಗಳ ಹೋಲಿಕೆ  

ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.


ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾಯಿತು. ಎಂದೇ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಕರೇ ಕಳುಹಿಸಿದರು. ಹದರೆಜೆರನ ಸೇನಾಪತಿಯಾದ ಶೋಫಕನು ಅವರ ನಾಯಕನಾದನು.


ಸಿರಿಯಾದವರು ಯುದ್ಧಕ್ಕೆ ನಿಂತಾಗ ಇಸ್ರಯೇಲರ ಮುಂದೆ ಸೋತು ಓಡಿಹೋದರು;ದಾವೀದನು ಸಿರಿಯಾದವರ ಏಳುಸಾವಿರ ರಥಗಳನ್ನು ಹಾಳುಮಾಡಿದನು. ನಲವತ್ತು ಸಾವಿರ ಮಂದಿ ಕಾಲಾಳುಗಳನ್ನು ಸದೆಬಡಿದನು. ಸೇನಾಪತಿಯಾದ ಶೋಫಕನನ್ನೂ ಕೊಂದುಬಿಟ್ಟನು.


ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿ ದಾಟಿ ಹೇಲಾಮಿಗೆ ಬಂದನು. ಸಿರಿಯಾದವರು ವ್ಯೂಹಕಟ್ಟಿ ದಾವೀದನೊಡನೆ ಯುದ್ಧಕ್ಕೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು