Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:2 - ಕನ್ನಡ ಸತ್ಯವೇದವು C.L. Bible (BSI)

2 ದಾವೀದನು, “ನಾಹಾಷನು ನನಗೆ ಸ್ನೇಹ ತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ದೂತರನ್ನು ಕಳುಹಿಸಿದನು. ಅವರು ಹಾನೂನನನ್ನು ಸಂತೈಸುವುದಕ್ಕಾಗಿ ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆ ತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನು, “ನಾಹಾಷನು ನನಗೆ ದಯೆ ತೋರಿಸಿದ್ದನು. ಅವನ ಮಗನಾದ ಹಾನೂನನಿಗೆ ನಾನೂ ದಯೆತೋರುವೆನು” ಎಂದು ಹೇಳಿ ಹಾನೂನನನ್ನು ಸಂತೈಸಲು ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನ್ ದೇಶಕ್ಕೆ ಹೋಗಿ ದುಃಖದಲ್ಲಿದ್ದ ಹಾನೂನನನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:2
14 ತಿಳಿವುಗಳ ಹೋಲಿಕೆ  

ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿದನು. “ಇಗೋ, ಸರ್ವೇಶ್ವರ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ,” ಎಂದು ಹೇಳಿದನು.


ಆಗ ಅಲ್ಲಿದ್ದವರು ತಮ್ಮಲ್ಲೇ ಒಬ್ಬ. ಜ್ಞಾನಿಯನ್ನು ಕಂಡುಹಿಡಿದರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದ. ಆದರೆ ಆ ಬಡಜ್ಞಾನಿಯನ್ನು ಆಮೇಲೆ ಯಾರೂ ಸ್ಮರಿಸಲಿಲ್ಲ.


ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತೆಂದು ವಿಚಾರಿಸಿದಾಗ, ಅವನ ಆಸ್ಥಾನಸೇವಕರು ಯಾವುದೂ ಇಲ್ಲವೆಂದು ಉತ್ತರವಿತ್ತರು.


ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.


ಸನ್ಬಲ್ಲಟನು, ಟೋಬೀಯನು, ಅರೇಬಿಯರು, ಅಮ್ಮೋನಿಯರು ಹಾಗು ಅಷ್ಡೋದಿನವರು ಜೆರುಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂಬುದನ್ನು ಕೇಳಿದರು.


ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.


ಆಗ ಎಲೀಷನು ಗೇಹಜಿಯ ಮುಖಾಂತರ ಆಕೆಯನ್ನು, “ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದೆ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನ್ನ ಪರವಾಗಿ ಅರಸನ ಮುಂದಾಗಲಿ, ಸೇನಾಪತಿಯ ಮುಂದಾಗಲಿ ಮಾತಾಡಬೇಕಾದರೆ ಹೇಳು,” ಎಂದು ಕೇಳಿದನು. ಆಕೆ, “ನಾನು ಸ್ವಕುಲದವರ ಮಧ್ಯೆ ಸುಖವಾಗಿದ್ದೇನೆ,” ಎಂದು ಉತ್ತರಕೊಟ್ಟಳು.


ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರು ಇನ್ನೂ ಉಳಿದಿದ್ದಾರೋ? ಯೋನಾತಾನನ ಸಲುವಾಗಿ ನಾನು ಅವರಿಗೆ ದಯೆತೋರಿಸಬೇಕೆಂದಿರುತ್ತೇನೆ,” ಎಂದು ವಿಚಾರಿಸಿದನು.


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ಇದಾದನಂತರ ಅಮ್ಮೋನಿಯರ ಅರಸ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗ ಅರಸನಾದನು.


ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು