Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಅವರ ಸಹಾಯಕ್ಕಾಗಿ ಮೆದಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೀಗೆ ಅಮ್ಮೋನಿಯರು ಮೂವತ್ತೆರಡು ಸಾವಿರ ರಥಗಳಿಂದ ಯುದ್ಧಕ್ಕೆ ಸಜ್ಜಾದರು. ಅಲ್ಲದೆ ಮಾಕಾದ ಅರಸನಿಗೆ ಹಣವನ್ನು ಕೊಟ್ಟು ಅವನ ಸೈನ್ಯವನ್ನೂ ತಮ್ಮ ಸಹಾಯಕ್ಕೆ ಬರಮಾಡಿದರು. ಮಾಕದ ಅರಸನೂ ಅವನ ಸೈನಿಕರೂ ಬಂದು ಮೇದೆಬ ಪಟ್ಟಣದ ಬಳಿ ಪಾಳೆಯ ಮಾಡಿಕೊಂಡರು. ಇತ್ತ ಅಮ್ಮೋನಿಯರೂ ಯುದ್ಧಸನ್ನದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ, ಮಾಕದ ಅರಸನನ್ನೂ, ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಊರಿನ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋನಿಯರು ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:7
12 ತಿಳಿವುಗಳ ಹೋಲಿಕೆ  

ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ ಮತ್ತು ಅದೇ ಕಣಿವೆಯಲ್ಲಿದ್ದ ಮತ್ತೊಂದು ನಗರ, ಇವುಗಳಿಂದ ದೀಬೋನಿನವರೆಗೆ ವಿಸ್ತರಿಸಿಕೊಂಡಿದ್ದ ಮೇದಬದ ತಪ್ಪಲ ನಾಡು;


ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ, ಅದೇ ಕಣಿವೆಯ ಮಧ್ಯೆಯಿದ್ದ ನಗರ;


ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು, ಸೈನ್ಯದವರೆಲ್ಲರು ಅವನ ಹಿಂದೆ ಹೊರಟು ಇಸ್ರಯೇಲರ ಸಮೀಪಕ್ಕೆ ಬಂದರು; ಪೀಹಹೀರೋತಿನ ಬಳಿ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.


ಈ ಸುದ್ದಿ ದಾವೀದನಿಗೆ ಮುಟ್ಟಿತು. ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು