Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:16 - ಕನ್ನಡ ಸತ್ಯವೇದವು C.L. Bible (BSI)

16 ಅವನ ಇಬ್ಬರು ಹೆಣ್ಣು ಮಕ್ಕಳು: ಚೆರೂಯ ಹಾಗೂ ಅಬೀಗೈಲ ಎಂಬವರು. ಜೆಸ್ಸೆಯ ಮಗಳು ಚೆರೂಯಳಿಗೆ ಅಬೈ , ಯೋವಾಬ್ , ಅಸಾಹೇಲ್ ಎಂಬ ಮೂರು ಜನ ಮಕ್ಕಳಿದ್ದರು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಚೆರೂಯ ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ್, ಅಸಾಹೇಲ್ ಎಂಬ ಮೂವರು ಚೆರೂಯಳ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರ ತಂಗಿಯಂದಿರು ಯಾರೆಂದರೆ, ಚೆರೂಯ ಮತ್ತು ಅಬೀಗೈಲ್, ಚೆರೂಯಳ ಮೂರುಮಕ್ಕಳು ಯಾರೆಂದರೆ, ಅಬ್ಷೈ, ಯೋವಾಬ್ ಮತ್ತು ಅಸಾಹೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು. ಚೆರೂಯಳ ಮೂವರು ಮಕ್ಕಳು ಅಬೀಷೈ, ಯೋವಾಬ್, ಅಸಾಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:16
11 ತಿಳಿವುಗಳ ಹೋಲಿಕೆ  

ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.


ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.


ಅವನ ಇನ್ನೊಬ್ಬ ಮಗಳು ಅಬೀಗೈಲಳು ಇಷ್ಮಾಯೇಲನ ವಂಶಜ ಯೆತೆರ್ ಎಂಬವನನ್ನು ವಿವಾಹವಾಗಿ ಅಮಾಸ ಎಂಬ ಮಗನನ್ನು ಪಡೆದಳು.


ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು.


ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು,’ ಎಂಬ ಪಡೆಯ ನಾಯಕನಾಗಿದ್ದನು . ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದುಹಾಕಿ ‘ಮೂವತ್ತು ಪ್ರಮುಖ ವೀರರು ‘ ಎಂಬ ಪಡೆಯಲ್ಲಿ ಪ್ರಖ್ಯಾತ ನಾದನು .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು