Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:17 - ಕನ್ನಡ ಸತ್ಯವೇದವು C.L. Bible (BSI)

17 ಅವನ ಇನ್ನೊಬ್ಬ ಮಗಳು ಅಬೀಗೈಲಳು ಇಷ್ಮಾಯೇಲನ ವಂಶಜ ಯೆತೆರ್ ಎಂಬವನನ್ನು ವಿವಾಹವಾಗಿ ಅಮಾಸ ಎಂಬ ಮಗನನ್ನು ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಬೀಗೈಲಳು ಅಮಾಸನ ತಾಯಿ; ಇಷ್ಮಾಯೇಲ್ಯನಾದ ಯೆತೆರ್ ಎಂಬವನು ಅವನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಬೀಗೈಲಳು ಅಮಾಸನ ತಾಯಿ. ಅಮಾಸನ ತಂದೆ ಯೆತೆರ್, ಇವನು ಇಷ್ಮಾಯೇಲ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:17
8 ತಿಳಿವುಗಳ ಹೋಲಿಕೆ  

ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


“ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.


ಅವನ ಇಬ್ಬರು ಹೆಣ್ಣು ಮಕ್ಕಳು: ಚೆರೂಯ ಹಾಗೂ ಅಬೀಗೈಲ ಎಂಬವರು. ಜೆಸ್ಸೆಯ ಮಗಳು ಚೆರೂಯಳಿಗೆ ಅಬೈ , ಯೋವಾಬ್ , ಅಸಾಹೇಲ್ ಎಂಬ ಮೂರು ಜನ ಮಕ್ಕಳಿದ್ದರು .


ಹೆಚ್ರೋನನ ಮಗ ಕಾಲೇಬ, ಅಜೂಬಳನ್ನು ಮದುವೆಯಾಗಿ ಯೆರ್ಯೋತ್ ಎಂಬ ಮಗಳನ್ನು ಪಡೆದನು. ಆಕೆಯ ಮೂರು ಜನ ಗಂಡುಮಕ್ಕಳು: ಯೇಷೆರ್, ಶೊಬಾಬ್, ಅರ್ದೋನ್ ಎಂಬವರು.


ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು