Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:17 - ಕನ್ನಡ ಸತ್ಯವೇದವು C.L. Bible (BSI)

17 ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ದಾವೀದನು ದೇವರಿಗೆ - ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ! ಮಹಾಪಾಪಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವದಕ್ಕೆ ಅವರಿಗೆ ವಿರೋಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾವೀದನು ದೇವರಿಗೆ, “ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:17
20 ತಿಳಿವುಗಳ ಹೋಲಿಕೆ  

ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II


ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ನಮ್ಮನೊಪ್ಪಿಸಿರುವೆ ವಧ್ಯಸ್ಥಾನಕೊಯ್ದ ಕುರಿಗಳಂತೆ I ಚದರಿಸಿಬಿಟ್ಟಿರುವೆ ನಮ್ಮನು ಅನ್ಯ ಜನಾಂಗಗಳ ಮಧ್ಯೆ II


ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು.


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗು ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ.


“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ಇಂತಿರುವಲ್ಲಿ ನೀವು ಮತ್ತೆ ಸರ್ವೇಶ್ವರನನ್ನು ಬಿಟ್ಟುಬಿಡುತ್ತೀರೋ? ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದರೆ ನಾಳೆಯೇ ಅವರ ಕೋಪಾಗ್ನಿ ಇಸ್ರಯೇಲ್ ಸರ್ವಸಭೆಯ ಮೇಲೆ ಉರಿಯತೊಡಗುವುದು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಆದುದರಿಂದ ತಮ್ಮಲ್ಲಿ ನಾನು ಮಾಡುವ ಪ್ರಾರ್ಥನೆ ಇದು; ಈ ಹುಡುಗನಿಗೆ ಬದಲಾಗಿ, ತಮ್ಮ ಸೇವಕನಾದ ನನ್ನನ್ನು ತಮ್ಮ ಗುಲಾಮನನ್ನಾಗಿ ಇರಿಸಿಕೊಳ್ಳಿ; ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆ ಅನುಗ್ರಹಿಸಿ.


ಯೋನನು: “ನನ್ನನ್ನು ಎತ್ತಿ ಸಮುದ್ರಕ್ಕೆ ಎಸೆಯಿರಿ. ಆಗ ಅದು ಶಾಂತವಾಗುವುದು. ನೀವು ಇಂಥ ಭೀಕರ ಬಿರುಗಾಳಿಗೆ ತುತ್ತಾಗಲು ನಾನೇ ಕಾರಣ. ಇದನ್ನು ನಾನು ಚೆನ್ನಾಗಿ ಬಲ್ಲೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು