Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:22 - ಕನ್ನಡ ಸತ್ಯವೇದವು C.L. Bible (BSI)

22 ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪೂರ್ಣ ಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದಾವೀದನು ಅವನಿಗೆ - ನಿನ್ನ ಕಣವನ್ನೂ ಭೂವಿುಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟಿಸುತ್ತೇನೆ; ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದಾವೀದನು ಒರ್ನಾನನಿಗೆ, “ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಈ ಭಯಂಕರ ವ್ಯಾಧಿಯು ನಿಂತುಹೋಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:22
8 ತಿಳಿವುಗಳ ಹೋಲಿಕೆ  

ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು.


“ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು.


ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು.


ಸತ್ತವರಿಗೂ ಹಾಗೂ ಬದುಕುವವರಿಗೂ ನಡುವೆ ಅವನು ನಿಂತನು. ಆ ವಿಪತ್ತು ಶಮನವಾಯಿತು.


ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.


ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು, ಕಣವನ್ನು ಬಿಟ್ಟುಹೋಗಿ, ಅವನಿಗೆ ಅಡ್ಡಬಿದ್ದನು.


ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದದ್ದನ್ನು ತೆಗೆದುಕೊಂಡು ಬಲಿ ಅರ್ಪಿಸಬಹುದು. ಬಲಿದಾನಕ್ಕೆ ಇಲ್ಲಿ ಹೋರಿಗಳೂ ಸೌದೆಗೆ ಹಂತೀಕುಂಟೆಗಳೂ ನೈವೇದ್ಯಕ್ಕೆ ಗೋದಿಯೂ ಇರುತ್ತವೆ, ಇವೆಲ್ಲವನ್ನೂ ಕೊಡುತ್ತೇನೆ,” ಎಂದು ಹೇಳಿದನು.


ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು