Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:24 - ಕನ್ನಡ ಸತ್ಯವೇದವು C.L. Bible (BSI)

24 ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಸರ್ವೇಶ್ವರನಿಗೆ ಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಸನಾದ ದಾವೀದನು ಒರ್ನಾನನಿಗೆ - ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದಕ್ಕೆ ದಾವೀದನು, “ನೋಡು, ನಾನು ಅವಕ್ಕೆಲ್ಲಾ ಪೂರ್ಣಕ್ರಯ ಕೊಡುತ್ತೇನೆ. ನಿನ್ನಿಂದ ನಾನು ಪುಕ್ಕಟೆಯಾಗಿ ತೆಗೆದುಕೊಂಡದ್ದನ್ನು ದೇವರಿಗೆ ಸಮರ್ಪಿಸುವುದಿಲ್ಲ. ಧರ್ಮಾರ್ಥವಾಗಿ ದೊರೆತದ್ದನ್ನು ದೇವರಿಗೆ ಕಾಣಿಕೆಯಾಗಿ ಕೊಡುವದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:24
9 ತಿಳಿವುಗಳ ಹೋಲಿಕೆ  

ಅವರೆಲ್ಲರ ಮುಂದೆ ಎಫ್ರೋನನನ್ನು ಉದ್ದೇಶಿಸಿ, “ಕೊಡಲು ಇಷ್ಟವಿದ್ದರೆ ದಯವಿಟ್ಟು ನಾನು ಅರಿಕೆ ಮಾಡುವುದನ್ನು ಕೇಳು; ಆ ಜಮೀನಿಗೆ ಕ್ರಯ ಕೊಡುತ್ತೇನೆ; ಆ ಕ್ರಯವನ್ನು ತೆಗೆದುಕೊಳ್ಳಲು ಸಮ್ಮತಿಸಿದರೆ ನನ್ನ ಪತ್ನಿಯನ್ನು ಅಲ್ಲಿ ಸಮಾಧಿ ಮಾಡುತ್ತೇನೆ,” ಎಂದು ಹೇಳಿದನು.


ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.


ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ಅರಸರು ಅರೌನನಿಗೆ, “ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಸರ್ವೇಶ್ವರನಿಗೆ ಸುಮ್ಮನೆ ಸಿಕ್ಕಿದ್ದನ್ನು ಬಲಿದಾನವಾಗಿ ಅರ್ಪಿಸಲೊಲ್ಲೆನು,” ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ಬೆಳ್ಳಿ ನಾಣ್ಯಕ್ಕೆ ಕೊಂಡುಕೊಂಡನು.


ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದದ್ದನ್ನು ತೆಗೆದುಕೊಂಡು ಬಲಿ ಅರ್ಪಿಸಬಹುದು. ಬಲಿದಾನಕ್ಕೆ ಇಲ್ಲಿ ಹೋರಿಗಳೂ ಸೌದೆಗೆ ಹಂತೀಕುಂಟೆಗಳೂ ನೈವೇದ್ಯಕ್ಕೆ ಗೋದಿಯೂ ಇರುತ್ತವೆ, ಇವೆಲ್ಲವನ್ನೂ ಕೊಡುತ್ತೇನೆ,” ಎಂದು ಹೇಳಿದನು.


ಅಂತೆಯೇ ಆ ಭೂಮಿಗಾಗಿ ಅವನಿಗೆ ಆರುನೂರು ಬಂಗಾರದ ನಾಣ್ಯಗಳನ್ನು ಕೊಟ್ಟು,


ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು