Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:15 - ಕನ್ನಡ ಸತ್ಯವೇದವು C.L. Bible (BSI)

15 ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಇನ್ನೂ ಹೆಚ್ಚು ಕೂಡಿಸುವಿ. ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಬಳಿಯಲ್ಲಿ ಅನೇಕ ಬಡಗಿಗಳು ಮತ್ತು ಕಲ್ಲುಕುಟಿಗರು ಇದ್ದಾರೆ. ಬೇರೆ ಕೆಲಸಗಳ ಕುಶಲಕರ್ಮಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:15
10 ತಿಳಿವುಗಳ ಹೋಲಿಕೆ  

ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.


ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.


ಬೇರೆ ವಿವಿಧ ಶೃಂಗಾರದ ಕೆಲಸ ಮಾಡುವುದಕ್ಕೂ ಅವನನ್ನು ಆರಿಸಿಕೊಂಡಿದ್ದಾರೆ.


‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸು. ಚಿನ್ನದ ದಾರದಿಂದಲೂ ಹಾಗು ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರು ಅದನ್ನು ಅಲಂಕರಿಸಲಿ.


ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.


ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು.


ಹೀಗಿರಲು, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಮಾಡುವುದರಲ್ಲಿ, ಊದಾ, ಕೆಂಪು, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿ ಹಾಗೂ ಚಿತ್ರ ಕೆತ್ತುವುದರಲ್ಲಿ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆ ಗೊತ್ತುಮಾಡಿದಂಥ ಮತ್ತು ನನ್ನೊಡನೆ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇರುವಂಥ ಕಲಾಕುಶಲರೊಂದಿಗೆ ಅವನು ಕೆಲಸಮಾಡಲಿ.


ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು