Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:18 - ಕನ್ನಡ ಸತ್ಯವೇದವು C.L. Bible (BSI)

18 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲ ನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ತನ್ನ ಮಾತನ್ನು ಮುಂದುವರಿಸಿ, “ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ನಿಮಗೆ ಸಮಾಧಾನವನ್ನು ಅನುಗ್ರಹಿಸಿರುತ್ತಾನೆ. ನಮ್ಮ ಸುತ್ತಮುತ್ತಲಿನ ಶತ್ರುಗಳನ್ನು ಸೋಲಿಸಲು ಆತನು ನಮಗೆ ಸಹಾಯಮಾಡಿದ್ದಾನೆ. ಈಗ ಯೆಹೋವನೂ ಆತನ ಜನರೂ ಈ ದೇಶವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:18
14 ತಿಳಿವುಗಳ ಹೋಲಿಕೆ  

ಇಸ್ರಯೇಲ್ ದೇವರಾದ ಸರ್ವೇಶ್ವರ, ತಮ್ಮ ಪ್ರಜೆಗೆ ನೆಮ್ಮದಿಯನ್ನು ಅನುಗ್ರಹಿಸಿ, ಸದಾ ಜೆರುಸಲೇಮಿನಲ್ಲಿ ವಾಸಿಸುವವರಾದ ಕಾರಣ,


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;


ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.


ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.


ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮ್ಮ ಪರವಾಗಿ ಯುದ್ಧಮಾಡಿ, ನಿಮಗೆ ಜಯವನ್ನುಂಟುಮಾಡುವರು’ ಎಂದು ಹೇಳಬೇಕು


ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು