Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:2 - ಕನ್ನಡ ಸತ್ಯವೇದವು C.L. Bible (BSI)

2 ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಕೂಡಿಸುವದಕ್ಕೆ ಆಜ್ಞಾಪಿಸಿ ಅವರಲ್ಲಿದ್ದ ಕಲ್ಲು ಕುಟಿಗರನ್ನು ದೇವಾಲಯ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವದಕ್ಕೆ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲಿನಲ್ಲಿ ವಾಸಿಸುತ್ತಿದ್ದ ಪರದೇಶಸ್ಥರನ್ನೆಲ್ಲಾ ದಾವೀದನು ಬರಹೇಳಿ ಅವರಲ್ಲಿಂದ ಕಲ್ಲುಕುಟಿಗರನ್ನು ಆರಿಸಿ ತೆಗೆದುಕೊಂಡನು. ದೇವಾಲಯವನ್ನು ಕಟ್ಟಲು ಕಲ್ಲುಗಳನ್ನು ಕೆತ್ತಿ ತಯಾರಿಸುವ ಕೆಲಸ ಅವರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:2
16 ತಿಳಿವುಗಳ ಹೋಲಿಕೆ  

ಸೊಲೊಮೋನನು, ತನ್ನ ತಂದೆ ದಾವೀದನು ಮಾಡಿಸಿದ ಜನಗಣತಿಯ ಆಧಾರದಿಂದ, ಇಸ್ರಯೇಲ್ ನಾಡಿನಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕಿಸಿದನು. ಅವರು ಒಂದು ಲಕ್ಷ ಐವತ್ತಮೂರು ಸಾವಿರದ ಆರುನೂರು ಮಂದಿ ಇದ್ದರು.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಟೈರಿನ ಅರಸ ಹೀರಾಮನು ದಾವೀದನ ಬಳಿಗೆ ತನ್ನ ವಾಣಿಜ್ಯ ನಿಯೋಗವನ್ನು ಕಳುಹಿಸಿದನು. ಅರಮನೆಯನ್ನು ಕಟ್ಟಲು ಅವನಿಗೆ ದೇವದಾರು ಮರದ ದಿಮ್ಮಿಗಳನ್ನು, ಶಿಲ್ಪಿಗಳನ್ನು ಹಾಗು ಬಡಗಿಯವರನ್ನು ಕಳುಹಿಸಿಕೊಟ್ಟನು.


ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸುತ್ತಿದ್ದರು.


ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ.


ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.


ತರುವಾಯ ಅರಸ ದಾವೀದನು, “ದೇವರು ನನ್ನ ಮಗ ಸೊಲೊಮೋನನನ್ನೇ ಆರಿಸಿಕೊಂಡಿದ್ದಾರೆ. ಆದರೆ ಅವನು ಇನ್ನೂ ಚಿಕ್ಕವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟ ತಕ್ಕ ಮಂದಿರ ದೇವರಾದ ಸರ್ವೇಶ್ವರನಿಗಾಗಿ!


ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು