Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:6 - ಕನ್ನಡ ಸತ್ಯವೇದವು C.L. Bible (BSI)

6 ಆಮೇಲೆ ದಾವೀದನು ತನ್ನ ಮಗ ಸೊಲೊಮೋನನನ್ನು ಕರೆಯಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ತನ್ನ ಮಗನಾದ ಸೊಲೊಮೋನನನ್ನು ಕರೆದು ಇಸ್ರೇಲಿನ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟುವಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತನ್ನ ಮಗ ಸೊಲೊಮೋನನನ್ನು ಕಳುಹಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಆಲಯವನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:6
15 ತಿಳಿವುಗಳ ಹೋಲಿಕೆ  

ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.


ಅವನ ಮೇಲೆ ಹಸ್ತನಿಕ್ಷೇಪ ಮಾಡಿ ಅವನಿಗೆ ಅಧಿಕಾರವನ್ನು ವಹಿಸಿಕೊಟ್ಟನು.


ಅವನ ಅಪ್ಪಣೆ ಪಡೆದ ಸೇವಕರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳಿಸಿಬಿಟ್ಟರು.


ದಾವೀದನ ಮರಣಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು:


ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು.


ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.


ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು