Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:26 - ಕನ್ನಡ ಸತ್ಯವೇದವು C.L. Bible (BSI)

26 ಲೇವಿಯರು ಇನ್ನು ಮುಂದೆ ಅವರ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲವೆಂದುಕೊಂಡು, ದಾವೀದನು ಈ ಪ್ರಕಾರ ವಿಧಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ ಆರಾಧನಾ ಸಾಮಾಗ್ರಿಗಳನ್ನೂ ಹೊರುವದು ಅವಶ್ಯವಿಲ್ಲವೆಂದುಕೊಂಡು ದಾವೀದನು ಈ ಪ್ರಕಾರ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನ ಗುಡಾರವನ್ನಾಗಲಿ ಅದರ ಸಾಮಾಗ್ರಿಗಳನ್ನಾಗಲಿ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಲೇವಿಯರನ್ನು ಕುರಿತು ಅವರು ಗುಡಾರವನ್ನೂ, ಅವರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:26
7 ತಿಳಿವುಗಳ ಹೋಲಿಕೆ  

ದಂಡು ಹೊರಡುವಾಗ ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಗರ್ಭಗುಡಿಯನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಬೇಕು.


ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಯೊಬ್ಬನಿಗೆ ಅವನವನ ಕೆಲಸ ಹಾಗೂ ಹೊಣೆಯನ್ನು ಗೊತ್ತುಮಾಡಲಾಯಿತು. ಹೀಗೆ ಸರ್ವೇಶ್ವರನ ಆಜ್ಞೆಯ ಮೇರೆಗೆ ಜನಗಣತಿ ನಡೆಯಿತು.


ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.


ಎಲ್ಲ ಇಸ್ರಯೇಲರಿಗೆ ಉಪದೇಶಿಸತಕ್ಕವರೂ ಸರ್ವೇಶ್ವರನಿಗೆ ಪ್ರತಿಷ್ಠರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಯೇಲ್ ಅರಸನೂ ಆದ ಸೊಲೊಮೋನನು ಕಟ್ಟಿಸಿದ ಮಹಾದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿ; ಅದನ್ನು ಹೆಗಲ ಮೇಲೆ ಹೊತ್ತುಕೊಳ್ಳುವುದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಸರ್ವೇಶ್ವರನಿಗೂ ಅವರ ಪ್ರಜೆಗಳಾದ ಇಸ್ರಯೇಲರಿಗೂ ಸೇವೆಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು