Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:29 - ಕನ್ನಡ ಸತ್ಯವೇದವು C.L. Bible (BSI)

29 ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:29
16 ತಿಳಿವುಗಳ ಹೋಲಿಕೆ  

ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.


ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?


ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್‍ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿಸಮಾಧಾನ ಬಲಿ, ಇಸ್ರಯೇಲರ ದೋಷಪರಿಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸಕಾರ್ಯಗಳಿಗಾಗಿ ವೆಚ್ಚವಾಗಬೇಕು;


ಆಮೇಲೆ ಅವರು ಅರಮನೆಗೆ ಹೋಗಿ, ಅರಸ ಹಿಜ್ಕೀಯನಿಗೆ, “ನಾವು ಸರ್ವೇಶ್ವರನ ಆಲಯವನ್ನು ಪೂರ್ತಿಯಾಗಿ ಶುದ್ಧೀಕರಿಸಿದೆವು. ಬಲಿಪೀಠವನ್ನು, ಅದರ ಉಪಕರಣಗಳನ್ನು, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು ಹಾಗು ಅದರ ಸಾಮಗ್ರಿಗಳನ್ನೂ ಶುದ್ಧಮಾಡಿದೆವು.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿಗಳು ಯಾವುವೆಂದರೆ :- ಬಂಗಾರದ ಧೂಪವೇದಿಕೆ, ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,


ದೇವರ ಸೇವೆಗೆ ನಿಗದಿಯಾದ ನಾಣ್ಯದ ಮೇರೆಗೆ 1365 ನಾಣ್ಯಗಳನ್ನು ತೆಗೆದುಕೊಂಡನು.


ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ, ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯ ಪದಾರ್ಥವೆಲ್ಲ ಅದನ್ನು ಸಮರ್ಪಿಸುವ ಯಾಜಕನಿಗೆ ಸೇರತಕ್ಕದ್ದು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;


ಪ್ರತಿದಿನ ಬೆಳಿಗ್ಗೆ, ಸಂಜೆ ಮತ್ತು ನಿಯಮಿತ ಸಂಖ್ಯೆಗೆ ಸರಿಯಾಗಿ ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ, ಸರ್ವೇಶ್ವರನ ಮುಂದೆ ತಪ್ಪದೆ ನಡೆಯುವ ದಹನಬಲಿ ಸಮರ್ಪಣೆಯ ಹೊತ್ತಿನಲ್ಲಿ, ಸರ್ವೇಶ್ವರನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು