Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:4 - ಕನ್ನಡ ಸತ್ಯವೇದವು C.L. Bible (BSI)

4 ಇವರಲ್ಲಿ ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ, ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಾವೀದನು ಇವರಲ್ಲಿ ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ ಮಂದಿಯನ್ನೂ ನ್ಯಾಯಾಧಿಪತಿಗಳನ್ನಾಗಿ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಹೇಳಿದ್ದೇನೆಂದರೆ, “ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಯೆಹೋವ ದೇವರ ಮನೆಯ ಕೆಲಸವನ್ನು ನಡಿಸುವವರಾಗಿದ್ದರು. ಮತ್ತು ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:4
16 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದೊಡನೆ ಜೆರುಸಲೇಮಿಗೆ ಹಿಂದಿರುಗಿ ಬಂದು, ಲೇವಿಯರಿಂದ, ಯಾಜಕರ ಹಾಗು ಇಸ್ರಯೇಲ್ ಗೋತ್ರಪ್ರಧಾನರಿಂದ ಕೆಲವರನ್ನು ಆರಿಸಿ, ಸರ್ವೇಶ್ವರನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರ್ಪುನೀಡಲು ಜೆರುಸಲೇಮಿನಲ್ಲೇ ಇರಿಸಿದನು. ಅವರಿಗೆ,


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ದೇವಾಲಯ ಸೇವಾಸಂಬಂಧದಲ್ಲಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯ ಮಗನೂ ಹಷಬ್ಯನ ಮೊಮ್ಮಗನೂ ಮತ್ತನ್ಯನ ಮರಿಮಗನೂ ಮೀಕನ ವಂಶದವನೂ ಆದ ಉಜ್ಜೀಯು ಜೆರುಸಲೇಮಿನಲ್ಲಿದ್ದ ಲೇವಿಯರ ನಾಯಕನು.


ಜೆಕ್ರಿಯ ಮಗನಾದ ಯೋವೇಲನು ಇವರ ನಾಯಕ; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ.


ಅವರ ಸಹೋದರರಾದ ಇತರ ಲೇವಿಯರು ಆರಾಧನೆಯ ಸ್ಥಳದಲ್ಲಿ ಬೇರೆ ಕೆಲಸಗಳಿಗೆ ನೇಮಕವಾಗಿದ್ದರು.


ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.


ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.


ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನೋಡಿಕೊಳ್ಳುತ್ತಿದ್ದರು; ಎಲ್ಲ ಲೇಖಕರು, ಅಧಿಕಾರಿಗಳು ಹಾಗು ದ್ವಾರಪಾಲಕರು ಲೇವಿಯರೇ ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು