Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:6 - ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಆ ಲೇವಿಯರನ್ನು ಗೇರ್ಷೋನ್ಯರು,ಮಕೆಹಾತ್ಯರು, ಮೆರಾರೀಯರು ಎಂಬ ಮೂರು ವರ್ಗಗಳಾಗಿ ವಿಂಗಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಅವನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು, ಮೆರಾರೀಯರು ಇವರನ್ನು ವರ್ಗವರ್ಗಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಲೇವಿಯರನ್ನು ಮೂರು ಗುಂಪುಗಳನ್ನಾಗಿ ಮಾಡಿದನು. ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ದಾವೀದನು ಗೇರ್ಷೋನ್ಯರು, ಕೊಹಾತ್ಯರು, ಮೆರಾರೀಯರು ಎಂಬ ಲೇವಿಯರನ್ನು ಮೂರು ವರ್ಗಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:6
18 ತಿಳಿವುಗಳ ಹೋಲಿಕೆ  

ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಲೇವಿಯ ಮೂವರು ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.


ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.


ಲೇವಿಗೆ ಗೇರ್ಷೋಮ್, ಕೆಹಾತ್, ಮೆರಾರಿ ಎಂಬ ಮೂರು ಮಂದಿ ಮಕ್ಕಳಿದ್ದರು.


ಸೇವೆಯ ಸಂಬಂಧವಾದುದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;


ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.


ದೇವಾಲಯದ ಕಾವಲುಗಾರರಾಗಿ ಸೇವೆಮಾಡಲು ನೇಮಕಗೊಂಡ ಲೇವಿಯರ ಹೆಸರುಗಳು: ಕೋರಹೀಯನಾದ ಮೆಷೆಲೆಮ್ಯ; ಇವನು ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ;


ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.


ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಹಾಗೂ ಶಿಮ್ಮೀ ಎಂಬವರು.


ಯಾಜಕರ ಮತ್ತು ಲೇವಿಯರ ವರ್ಗಗಳು, ಸರ್ವೇಶ್ವರನ ಆಲಯದಲ್ಲಿ ನಡೆಯ ತಕ್ಕ ಎಲ್ಲಾ ಆರಾಧನೆ,


ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.


ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಅಭಿಷೇಕದಿಂದ ಪ್ರತಿಷ್ಠಿತರಾದವರು ಇವರೇ.


ಲೇವಿಯ ಮಕ್ಕಳ ಹೆಸರುಗಳು ಇವು: ಗೇರ್ಷೋನ್, ಕೆಹಾತ್, ಮೆರಾರೀ.


“ಕೆಹಾತ್ಯರು ಕೈಗೊಳ್ಳಬೇಕಾದ ಕರ್ತವ್ಯಗಳು ಇವು: ದೇವದರ್ಶನದ ಗುಡಾರದಲ್ಲಿ ಪರಮ ಪವಿತ್ರವಾದ ವಸ್ತುಗಳನ್ನು ಅವರು ನೋಡಿಕೊಳ್ಳಬೇಕು.


ಇಸ್ರಯೇಲರ ಅರಸ ದಾವೀದನೂ ಅವನ ಮಗ ಸೊಲೊಮೋನನೂ ಲಿಖಿತವಾಗಿ ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು