Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:3 - ಕನ್ನಡ ಸತ್ಯವೇದವು C.L. Bible (BSI)

3 ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರದಿಯ ಮೇಲೆ ಸೇವೆ ಸಲ್ಲಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರತಿಯ ಮೇಲೆ ಸೇವಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಲ್ಲಾಜಾರ್ ಮತ್ತು ಈತಾಮಾರ್ ಕುಲದ ಯಾಜಕರನ್ನು ದಾವೀದನು ಪ್ರತ್ಯೇಕಿಸಿ ಚಾದೋಕ್ ಮತ್ತು ಅಹೀಮೆಲೆಕ್ ಯಾಜಕರ ಸಹಾಯದಿಂದ ಎರಡು ವರ್ಗಗಳನ್ನಾಗಿ ಮಾಡಿದನು. ಚಾದೋಕನು ಎಲ್ಲಾಜಾರನ ವಂಶದವನಾಗಿದ್ದನು ಮತ್ತು ಅಹೀಮೆಲೆಕನು ಈತಾಮಾರನ ವಂಶದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ದಾವೀದನು ಎಲಿಯಾಜರನ ಮಕ್ಕಳಲ್ಲಿ ಚಾದೋಕನಿಗೂ, ಈತಾಮಾರನ ಮಕ್ಕಳಲ್ಲಿ ಅಹೀಮೆಲೆಕನಿಗೂ ಅವರ ಸೇವೆಯಲ್ಲಿರುವ ಪದ್ದತಿಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:3
15 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ, ತಮ್ಮ ಕುಲಬಂಧುಗಳಾದ ಆರೋನ್ಯರಂತೆ, ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆ ಹಾಗೂ ಯಾಜಕರ ಮತ್ತು ಲೇವಿಯರ ಕುಟುಂಬ ಮುಖ್ಯಸ್ಥರ ಮುಂದೆ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ನೆತನೇಲನ ಮಗ ಶೆಮಾಯನೆಂಬ ಲೇವಿಯ ಲೇಖಕನು, ಅರಸನ ಮುಂದೆ, ಅಧಿಪತಿಗಳ ಮುಂದೆ ಹಾಗೂ ಯಾಜಕನಾದ ಚಾದೋಕ್, ಎಬ್ಯಾತಾರನ ಮಗ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬಗಳ ಮುಖ್ಯಸ್ಥರ ಮುಂದೆ, ಆ ವರ್ಗಗಳ ಪಟ್ಟಿಯನ್ನು ಬರೆಯುತ್ತಿದ್ದನು. ಎಲ್ಲಾಜಾರ್ಯರ ಒಂದು ವರ್ಗದವರ ಸರದಿ ಆದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವೆಸಲ್ಲಿಸಬೇಕೆಂದು ನೇಮಿಸಿ, ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡುತ್ತಿದ್ದರು.


ಯಾಜಕ ಚಾದೋಕ ಮತ್ತು ಅವನ ಜೊತೆ ಯಾಜಕರು ಗಿಬ್ಯೋನಿನಲ್ಲಿದ್ದ ಸರ್ವೇಶ್ವರನ ಗುಡಾರದಲ್ಲಿ ಆರಾಧನೆಯನ್ನು ನಡೆಸಲು ನೇಮಕರಾಗಿದ್ದರು.


ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಶೆವನು ಕಾರ್ಯದರ್ಶಿ, ಚಾದೋಕ್ ಹಾಗು ಎಬ್ಯಾತಾರರು ಯಾಜಕರು;


ದಾವೀದನು ನೋಬ್ ಊರಲ್ಲಿದ್ದ ಯಾಜಕ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡನು. “ನಿಮ್ಮ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ; ನೀವು ಒಬ್ಬರೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.


ಎಲ್ಲಾಜಾರನ ಸಂತಾನದಲ್ಲಿ ಕುಟುಂಬ ಮುಖ್ಯಸ್ಥರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದುದರಿಂದ, ಎಲ್ಲಾಜಾರ್ಯರ ಕುಟುಂಬಗಳನ್ನು ಮುಖ್ಯಸ್ಥರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,


ಅಹೀಟೂಬನ ಮಗ ಚಾದೋಕನು ಹಾಗು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಶವ್ಷನು ಅವನಿಗೆ ಲೇಖಕನಾಗಿದ್ದನು.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು