Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:17 - ಕನ್ನಡ ಸತ್ಯವೇದವು C.L. Bible (BSI)

17 ಲೇವಿಯರಲ್ಲಿ ಪ್ರತಿದಿನವೂ ಪೂರ್ವ ಬಾಗಿಲನ್ನು ಆರು ಮಂದಿ, ಪಶ್ಚಿಮ ಬಾಗಿಲನ್ನು ನಾಲ್ಕು ಮಂದಿ, ದಕ್ಷಿಣ ಬಾಗಿಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಿಲುಗಳನ್ನು ಇಬ್ಬಿಬ್ಬರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಲೇವಿಯರಲ್ಲಿ ಪ್ರತಿದಿನವೂ ಮೂಡಣ ಬಾಗಲನ್ನು ಆರು ಮಂದಿ, ಪಡುವಣ ಬಾಗಲನ್ನು ನಾಲ್ಕು ಮಂದಿ, ತೆಂಕಣ ಬಾಗಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಲುಗಳನ್ನು ಇಬ್ಬಿಬ್ಬರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಿಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ಇಬ್ಬರು ಲೇವಿಯರು ಬೆಲೆಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:17
6 ತಿಳಿವುಗಳ ಹೋಲಿಕೆ  

ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ದಿಕ್ಕುಗಳಲ್ಲಿ ಒಂದೊಂದು ದ್ವಾರ ಇದ್ದು ಪ್ರತಿಯೊಂದಕ್ಕೂ ಒಬ್ಬೊಬ್ಬ ಪ್ರಮುಖ ದ್ವಾರಪಾಲಕನಿದ್ದನು.


ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮ ಬಾಗಿಲೂ ಅದರ ಸಮೀಪದಲ್ಲಿರುವ ಶೆಲ್ಲೆಕೆತೆಂಬ ಬಾಗಿಲೂ ಚೀಟಿನಿಂದ ನೇಮಕವಾಗಿದ್ದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.


ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿಯ ಬಾಗಿಲನ್ನು ನಾಲ್ಕು ಮಂದಿ, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.


ಪೂರ್ವದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ಲನ ಮಗ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅದು ಮಾತ್ರವಲ್ಲ, ಸರ್ವೇಶ್ವರನಿಗೆ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು.ದೈವಪುರುಷ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು