Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:26 - ಕನ್ನಡ ಸತ್ಯವೇದವು C.L. Bible (BSI)

26 ಜಿಕ್ರೀಯ ಮಗನೂ ಆಗಿರುವ ಶೆಕೋಮೋತನೂ ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರ ಬಂಧುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಶೆಲೋಮೋತನೂ ಅವನ ಸಹೋದರರೂ ಪ್ರತಿಷ್ಠಿತವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರಬಂಧುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು. ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಾಗ್ರಿಗಳನ್ನು ಒದಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ಶೆಲೋಮೋತನೂ ಅವನ ಸಹೋದರರೂ ಅರಸನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತ್ರುಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆ ಮಾಡಿದ ಪ್ರತಿಷ್ಠಿತವಾದವುಗಳ ಬೊಕ್ಕಸಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:26
13 ತಿಳಿವುಗಳ ಹೋಲಿಕೆ  

ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ


ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.


ಎಲೀಯೆಜೆರನ ಮಗ ರೆಹಬ್ಯನಿಗೆ ಹುಟ್ಟಿದ ಯೆಶಾಯನ ಮರಿಮಗನೂ ಯೋರಾಮನ ಮೊಮ್ಮಗನೂ


ಅರಸನಾದ ದಾವೀದನೂ ಗೋತ್ರ ಪ್ರಧಾನರೂ ಸಹಸ್ರ ಅಧಿಪತಿಗಳೂ ಶತಾಧಿಪತಿಗಳ ಸೇನಾನಾಯಕರೂ ಸರ್ವೇಶ್ವರನ ಆಲಯದ ವೃದ್ಧಿಗಾಗಿ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಸರ್ವೇಶ್ವರನಿಗೆಂದು ಮುಡಿಪಾಗಿಟ್ಟರು.


ಜೆರುಸಲೇಮಿನಲ್ಲಿ ನೆಲೆಸಿದ ಲೇವಿಯರು: ಹಷಬ್ಯನ ಮಗ ಶೆಮಾಯ; ಇವನ ಪೂರ್ವಜರಲ್ಲಿ ಅಜ್ರೀಕಾಮ, ಹಷಬ್ಯ ಹಾಗು ಮೆರಾರೀ ಗೋತ್ರದ ಬಕ್ಬಕ್ಕರ್, ಹೆರೆಷ್, ಗಾಲಾಲ್ ಎಂಬವರಿದ್ದರು. ಶೆಮಾಯನ ಮಗ ಓಬದ್ಯ: ಇವನ ಪೂರ್ವಜರಲ್ಲಿ ಗಾಲಾಲ, ಯದೂತೂನ ಎಂಬವರಿದ್ದರು. ಮೀಕನ ಮಗ ಮತ್ತನ್ಯ: ಇವನ ಪೂರ್ವಜರಲ್ಲಿ ಜಿಕ್ರೀ, ಆಸಾಫ ಎಂಬವರಿದ್ದರು. ಆಸನ ಮಗನೂ ಎಲ್ಕಾನನ ಮೊಮ್ಮಗನೂ ಆದ ಬೆರೆಕ್ಯ; ನಟೋಫಾತ್ಯರ ಗ್ರಾಮಗಳಲ್ಲಿ ಇವನು ನೆಲೆಸಿದ್ದನು.


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು.


ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್‍ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್‍ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.


ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.


ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವಾಸಂಬಂಧದಲ್ಲಿ ಹಾಗು ಶುದ್ಧೀಕರಣ ಸಂಬಂಧದಲ್ಲಿ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರ ನಡೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು