Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:25 - ಕನ್ನಡ ಸತ್ಯವೇದವು C.L. Bible (BSI)

25 ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇವಿುಸಲ್ಪಟ್ಟವರು ಯಾರಂದರೆ - ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ ಹಳ್ಳಿಗಳಲ್ಲಿಯೂ ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್ ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್ ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಗ್ರಾಮಗಳಲ್ಲಿಯೂ, ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:25
11 ತಿಳಿವುಗಳ ಹೋಲಿಕೆ  

ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.


ಆಗ ಆಸನು ಸರ್ವೇಶ್ವರನಾಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಸಿರಿಯಾದ ಅರಸ ಬೆನ್ಹದದನಿಗೆ ಕಳುಹಿಸಿ,


ಆಗ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನೂ


ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಆ ಏಳು ವರ್ಷದ ಬೆಳೆಯನ್ನು ಜೋಸೆಫನು ಶೇಖರಿಸಿ ಪಟ್ಟಣಗಳಲ್ಲಿ ಇಟ್ಟನು. ಆಯಾ ಪಟ್ಟಣದ ಸುತ್ತಲಿದ್ದ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲೇ ಶೇಖರಿಸಿದನು.


ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ.


ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ;


ಇಸ್ರಯೇಲ್ ಗೋತ್ರ ಕುಟುಂಬಗಳ ಅಧ್ಯಕ್ಷರುಗಳು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಹಾಗೂ ಅರಸನ ಕೆಲಸದವರ ಮುಖ್ಯಸ್ಥರು ದೇವಾಲಯದ ಕೆಲಸಕ್ಕಾಗಿ ಸ್ವೇಚ್ಛೆಯಿಂದ


ಅರಾಬಾ ತಗ್ಗಿನವನಾದ ಅಬೀಅಲ್ಬೋನ್,


ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು