Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:2 - ಕನ್ನಡ ಸತ್ಯವೇದವು C.L. Bible (BSI)

2 ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:2
30 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ಸ್ವರ್ಗವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಇಂತಿರಲು, ನನ್ನಂಥವನಿಗೆ ಎಂಥ ಆಲಯವನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವಾದರೂ ಯಾವುದು?


“ಎಂದೆಂದಿಗು ಇದೇ ನನ್ನ ನಿವಾಸ I ಇರುವೆನಿಲ್ಲೇ, ಇದು ನನ್ನ ಅಭಿಲಾಶ II


ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II


ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ಮಂಜೂಷವನ್ನು ಜೆರುಸಲೇಮಿಗೆ ತಂದ ತರುವಾಯ ಆರಾಧನಾವಿಧಿಗಾಗಿ ಅರಸ ದಾವೀದನು ಸಂಗೀತಮಂಡಲಿಯನ್ನು ನೇಮಿಸಿದನು.


ಅರಸ ದಾವೀದನ ಸೇವಕರು ನಮ್ಮ ಒಡೆಯನೂ ಅರಸನೂ ಆದ ದಾವೀದನ ಮುಂದೆ ಬಂದು, ‘ನಿಮ್ಮ ದೇವರು ನಿಮ್ಮ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ! ರಾಜ್ಯವನ್ನು ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಅಭಿವೃದ್ಧಿಗೊಳಿಸಲಿ!’ ಎಂದು ಅವನನ್ನು ಹರಸಿದ್ದಾರೆ. ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು,


ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು.


“ನಿಮ್ಮ ಮಗ ಜೋಸೆಫನು ಬಂದಿದ್ದಾನೆ,” ಎಂದು ಯಕೋಬನಿಗೆ ತಿಳಿಸಿದಾಗ ಅವನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.


“ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ನಮ್ಮ ತಂದೆ ದಾವೀದನಿಗೆ ಎಲ್ಲಾ ಶತ್ರುಗಳು ವಶವಾದರು. ಅಲ್ಲಿಯವರೆಗೆ ಅವರು ಸುತ್ತಲೂ ಯುದ್ಧಗಳನ್ನು ನಡೆಸಬೇಕಾಗಿತ್ತು. ಆದ್ದರಿಂದ ತಮ್ಮ ದೇವರಾದ ಸರ್ವೇಶ್ವರನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದರು. ಇದು ನಿಮಗೆ ತಿಳಿದ ವಿಷಯ.


ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:


“ನನ್ನ ತಂದೆ ದಾವೀದನು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,


ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನನ್ನು ಕರೆಯಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು:


ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದೆ.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಸ್ಮರಿಸಿಕೊ ಪ್ರಭೂ, ಆತನು ಮಾಡಿದ ಶಪಥವನು I ಯಕೋಬ್ಯ ಘನದೇವನಿಗಾತ ಕೊಟ್ಟ ಈ ಮಾತನು II


ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು