Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:8 - ಕನ್ನಡ ಸತ್ಯವೇದವು C.L. Bible (BSI)

8 “ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಮಂಡಲಿಯಾದ ಸಮಸ್ತ ಇಸ್ರಾಯೇಲ್ಯರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೇ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವಾಸ್ತ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಾನು ದೇವರ ಸನ್ನಿಧಾನದಲ್ಲಿಯೂ ಎಲ್ಲಾ ಇಸ್ರೇಲರ ಮುಂದೆಯೂ ನಿಮಗಿದನ್ನು ಹೇಳುತ್ತಿದ್ದೇನೆ. ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನೀವು ಉತ್ತಮವಾದ ಈ ದೇಶವನ್ನು ಅನುಭವಿಸುವಿರಿ; ನಿಮ್ಮ ಸಂತತಿಯವರೂ ಇದರ ಸುಖವನ್ನು ಅನುಭವಿಸುವಂತೆ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದ್ದರಿಂದ ನೀವು ಈ ಉತ್ತಮ ದೇಶವನ್ನು ಸ್ವಾಧೀನಮಾಡಿಕೊಂಡು, ಅದನ್ನು ನಿರಂತರದಲ್ಲಿ ನಿಮ್ಮ ತರುವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ, ಯೆಹೋವ ದೇವರ ಸಭೆಯಾದ ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿಯೂ, ನಮ್ಮ ದೇವರು ಕೇಳಿಸುವಂತೆ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಗೊಳ್ಳಿರಿ ಎಂದು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:8
28 ತಿಳಿವುಗಳ ಹೋಲಿಕೆ  

“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ಹೀಗಿರಲಾಗಿ, ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗಾಗಿ ಅವರ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಲೂಬಾರದು. ಅವರಿಗೆ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ, ನೀವು ಬಲಗೊಂಡು, ಆ ನಾಡಿನ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತ ಸೊತ್ತನ್ನಾಗಿ ಬಿಡುವಿರಿ’ ಎಂದು ಹೇಳಿದಿರಲ್ಲವೆ?


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಸತತ ನಿನ್ನ ಧರ್ಮಶಾಸ್ತ್ರವನು ಕೈಗೊಳ್ಳುವೆ I ಯುಗಯುಗಾಂತರಕು ಅದನು ಪರಿಪಾಲಿಸುವೆ II


ನಿನ್ನ ನೇಮಗಳನು ಪ್ರಭೂ, ನೀನೆ ವ್ಯಕ್ತಪಡಿಸಿರುವೆಯಯ್ಯಾ I ಜಾಗರೂಕತೆಯಿಂದ ಪಾಲಿಸಬೇಕೆಂದು ನೀ ವಿಧಿಸಿರುವೆಯಯ್ಯಾ II


“ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II


ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು’ ಎಂದು ಅವರು ನನಗೆ ಹೇಳಿದ್ದಾರೆ.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


“ನಾನು ನಿಮಗೆ ವಿಧಿಸಿದ್ದನ್ನೆಲ್ಲ ಜಾಗರೂಕತೆಯಿಂದ ಅನುಸರಿಸಿ ನಡೆಯಿರಿ. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಬೇಡಿ, ಉಚ್ಚರಿಸಲೂ ಬೇಡಿ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಮೋಶೆ ಇಸ್ರಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.


ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು