Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:19 - ಕನ್ನಡ ಸತ್ಯವೇದವು C.L. Bible (BSI)

19 ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:19
12 ತಿಳಿವುಗಳ ಹೋಲಿಕೆ  

ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.


“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಗೊಳ್ಳಬೇಕು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು