Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:22 - ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನ ಸನ್ನಿಧಿಯಲ್ಲಿ ಮಹಾಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ದಾವೀದನ ಮಗ ಸೊಲೊಮೋನನನ್ನು ಮತ್ತೆ ಅರಸನನ್ನಾಗಿ ಆರಿಸಿಕೊಂಡು, ಅವನು ರಾಜನಾಗುವುದಕ್ಕೂ ಚಾದೋಕನು ಯಾಜಕನಾಗುವುದಕ್ಕೂ ಅಭಿಷೇಕಿಸಿ, ಸರ್ವೇಶ್ವರನಿಗೆ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿ ಆರಿಸಿಕೊಂಡು ಪ್ರಭುವಾಗುವದಕ್ಕೂ ಚಾದೋಕನನ್ನು ಯಾಜಕನಾಗುವದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ದಿವಸದಲ್ಲಿ ಮಹಾ ಸಂತೋಷದಿಂದ ಯೆಹೋವ ದೇವರ ಮುಂದೆ ತಿಂದು ಕುಡಿದರು. ಎರಡನೆಯ ಸಾರಿ ದಾವೀದನ ಮಗ ಸೊಲೊಮೋನನನ್ನು ಅರಸನನ್ನಾಗಿ ಸ್ವೀಕರಿಸಿದರು. ಯೆಹೋವ ದೇವರ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕನನ್ನು ಯಾಜಕನಾಗಿಯೂ ಅಭಿಷೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:22
19 ತಿಳಿವುಗಳ ಹೋಲಿಕೆ  

ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.


ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ, ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಪಾಲುಗಳನ್ನು ಕಳುಹಿಸಿ, ಬಹಳವಾಗಿ ಸಂತೋಷಪಟ್ಟರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.


ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ದೂರದ ಉತ್ತರದಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಗೋತ್ರಗಳ ಜನರು ತಮ್ಮ ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ರೊಟ್ಟಿ, ಅಂಜೂರ, ಒಣದ್ರಾಕ್ಷಿ, ದ್ರಾಕ್ಷಾರಸ, ಎಣ್ಣೆಗಳನ್ನು ಹೊತ್ತುತಂದರು. ಭೋಜನಕ್ಕೆ ಕುರಿದನಗಳನ್ನು ಸಹ ತೆಗೆದುಕೊಂಡು ಬಂದರು. ನಾಡಿನಲ್ಲೆಲ್ಲಾ ಸಂತೋಷ ಸಂಭ್ರಮವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು