Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:28 - ಕನ್ನಡ ಸತ್ಯವೇದವು C.L. Bible (BSI)

28 ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಐಶ್ವರ್ಯ ಮಾನ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:28
13 ತಿಳಿವುಗಳ ಹೋಲಿಕೆ  

ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.


ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ನನ್ನ ತರುವಾಯ ನನ್ನ ಮಗ ಸೊಲೊಮೋನನೇ ಅರಸನಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು. ನಾನು ನಿನಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಈ ಪ್ರಮಾಣವನ್ನು ಈ ದಿನವೇ ನೆರವೇರಿಸುತ್ತೇನೆ,” ಎಂದನು.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ಸೊಲೊಮೋನನು, “ನೀವು ನನ್ನ ತಂದೆ ದಾವೀದನಿಗೆ ಮಹಾಕೃಪೆಯನ್ನು ತೋರಿಸಿದಿರಿ. ಅವರ ಸ್ಥಾನದಲ್ಲಿ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.


ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;


ಇದಲ್ಲದೆ, ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.


ಇಸ್ರಯೇಲರಿಗೆ ಅರಸನಾಗಿದ್ದ ದಾವೀದನ ಮಗ ಸೊಲೊಮೋನನ ಜ್ಞಾನೋಕ್ತಿಗಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು