Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:29 - ಕನ್ನಡ ಸತ್ಯವೇದವು C.L. Bible (BSI)

29 ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದಾವೀದನ ಪೂರ್ವೋತ್ತರ ಚರಿತ್ರೆಯೂ ಅವನ ಆಳಿಕೆ, ಪರಾಕ್ರಮ, ಅವನಿಗೂ ಇಸ್ರಾಯೇಲ್ಯರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:29
14 ತಿಳಿವುಗಳ ಹೋಲಿಕೆ  

(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)


ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.


ರೆಹಬ್ಬಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಸೊಲೊಮೋನನ ಉಳಿದ ಸಾಧನೆಗಳನ್ನು ಹಾಗು ಅವನ ಜ್ಞಾನವನ್ನು ಕುರಿತು ‘ಸೊಲೊಮೋನನ ಚರಿತ್ರೆ’ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,


ದರ್ಶಿ ಸಮುವೇಲ, ಪ್ರವಾದಿ ನಾತಾನ ಹಾಗೂ ದರ್ಶಿ ಗಾದ, ಇವರ ಚರಿತ್ರೆಗಳಲ್ಲಿ ಲಿಖಿತವಾಗಿವೆ.


ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿ ನಾತಾನನ ಚರಿತ್ರೆ ಶೀಲೋವಿನವನಾದ ಅಹೀಯನ ಪ್ರವಾದನೆ ಹಾಗೂ ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿಡಲಾಗಿ ಇದೆ.


ಒಟ್ಟು ಇನ್ನೂರ ಹನ್ನೆರಡು ಮಂದಿ, ದ್ವಾರಪಾಲಕರಾಗಿ ನೇಮಕಗೊಂಡಿದ್ದರು. ಅವರು ನೆಲೆಸಿದ್ದ ಗ್ರಾಮಗಳಲ್ಲಿ ಅವರ ಹೆಸರುಗಳು ದಾಖಲಾಗಿದ್ದವು. ಈ ಜವಾಬ್ದಾರಿಯ ಸ್ಥಾನಗಳಿಗೆ ಅವರ ಪೂರ್ವಜರನ್ನು ನೇಮಿಸಿದವರು ಅರಸ ದಾವೀದನು ಮತ್ತು ಪ್ರವಾದಿ ಸಮುವೇಲನು.


ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಉಳಿದ ಅವನ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಯೇಲರ ರಾಜರ ಗ್ರಂಥದಲ್ಲಿ ಲಿಖಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು