Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:30 - ಕನ್ನಡ ಸತ್ಯವೇದವು C.L. Bible (BSI)

30 ದರ್ಶಿ ಸಮುವೇಲ, ಪ್ರವಾದಿ ನಾತಾನ ಹಾಗೂ ದರ್ಶಿ ಗಾದ, ಇವರ ಚರಿತ್ರೆಗಳಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಸ್ರೇಲಿನ ರಾಜನಾಗಿದ್ದಾಗ ದಾವೀದನು ಮಾಡಿದ ಎಲ್ಲಾ ಸಾಹಸಕಾರ್ಯಗಳನ್ನೂ ಅವನ ಪರಾಕ್ರಮ ಮತ್ತು ಅವನಿಗೆ ಸಂಭವಿಸಿದೆಲ್ಲದ್ದರ ಕುರಿತಾಗಿ ಅವುಗಳಲ್ಲಿ ಬರೆಯಲಾಗಿದೆ. ಇಸ್ರೇಲಿನ ಮತ್ತು ಅದರ ಸಮೀಪದಲ್ಲಿ ಅನ್ಯಜನಾಂಗಗಳ ಕುರಿತಾದ ಸಂಗತಿಗಳನ್ನು ಅವುಗಳಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದರ್ಶಿಯಾದ ಸಮುಯೇಲನ ಪುಸ್ತಕದಲ್ಲಿ, ಪ್ರವಾದಿಯಾದ ನಾತಾನನ ಪುಸ್ತಕದಲ್ಲಿ ಮತ್ತು ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:30
7 ತಿಳಿವುಗಳ ಹೋಲಿಕೆ  

ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.


ಕಾವಲುಗಾರನಾದ ದೂತನು ಆಕಾಶದಿಂದ ಇಳಿದುಬಂದು: ‘ಈ ಮರವನ್ನು ಕಡಿದು ಹಾಳುಮಾಡಿ. ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತಲು ಬೆಳೆದಿರಲಿ, ಆಕಾಶದ ಇಬ್ಬನಿ ಅದನ್ನು ತೋಯಿಸಲಿ. ಏಳು ವರ್ಷಕಾಲ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿ ಬರಲಿ’ ಎಂದು ಸಾರುವುದನ್ನು ರಾಜರಾದ ನೀವೇ ನೋಡಿದ್ದೀರಿ.”


ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.


ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೇಹುವಿನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು