Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:9 - ಕನ್ನಡ ಸತ್ಯವೇದವು C.L. Bible (BSI)

9 ಯಾಬೇಚ್ ಎಂಬವನು ಒಬ್ಬನಿದ್ದನು. ಅವನು ತನ್ನ ಕುಟುಂಬದಲ್ಲಿ ಬಹಳ ಗೌರವಾನ್ವಿತ ವ್ಯಕ್ತಿ. ಅವನು ಹುಟ್ಟುವಾಗ ಪ್ರಸವವೇದನೆ ಅಧಿಕವಾಗಿದ್ದರಿಂದ ಅವನ ತಾಯಿ, ಯಾಬೇಚ ಎಂಬ ಹೆಸರನ್ನು ಅವನಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತೆನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಹರ್ಹೇಲನು ಹಾರುಮನ ಮಗನು; ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಘನವಂತನಾಗಿದ್ದನು; ಇವನನ್ನು ಬಹುವೇದನೆಯಿಂದ ಹೆತ್ತೆನೆಂದು ಹೇಳಿ ಇವನ ತಾಯಿ ಇವನಿಗೆ ಯಾಬೇಚೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, “ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಬೇಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ, “ನಾನು ಇವನನ್ನು ವ್ಯಥೆಯಿಂದ ಹೆತ್ತೆನು,” ಎಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:9
10 ತಿಳಿವುಗಳ ಹೋಲಿಕೆ  

ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು.


ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು.


ಅನಂತರ ಅವನು ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗರ್ಭಧರಿಸಿ ಗಂಡು ಮಗುವಿಗೆ ಜನ್ಮವಿತ್ತಳು. ತಮ್ಮ ಕುಟುಂಬಕ್ಕೆ ಬಂದಿದ್ದ ಕಂಟಕದ ಜ್ಞಾಪಕಾರ್ಥವಾಗಿ ಅವನಿಗೆ ಬೆರೀಯ ಎಂದು ಹೆಸರಿಟ್ಟರು.


ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ.


ಅನೂಬ್, ಚೊಬೇಬ ಎಂಬವರ ತಂದೆ ಕೋಚ. ಇವನು ಹಾರುಮನ ಮಗ ಅಹರ್ಹೇಲನ ವಂಶಜರ ಮೂಲಪುರುಷ.


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ಹರ್ಷಗೊಳಿಸು ನಿನ್ನ ತಂದೆತಾಯಿಗಳನ್ನು; ಆನಂದಪಡಿಸು ನಿನ್ನ ಹೆತ್ತವಳನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು