Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:22 - ಕನ್ನಡ ಸತ್ಯವೇದವು C.L. Bible (BSI)

22 ಯುದ್ಧವು ದೇವರ ಚಿತ್ತಾನುಸಾರವಾದದ್ದರಿಂದ ಅವರು ಅನೇಕ ವೈರಿಗಳನ್ನು ಸಂಹರಿಸಿದರು ಮತ್ತು ತಾವು ಸೆರೆಯಾಗಿ ಹೋಗುವ ಕಾಲದವರೆಗೆ ಅಲ್ಲಿಯೇ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರ ಹಿಂಡುಗಳನ್ನು ಅಂದರೆ ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಇವುಗಳನ್ನೂ ಲಕ್ಷ ಜನವನ್ನೂ ಕೊಳ್ಳೆಹಿಡಿದು ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:22
11 ತಿಳಿವುಗಳ ಹೋಲಿಕೆ  

ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಅಹೀಮೋತ್‍ನ ವಂಶಜರು: ಎಲ್ಕಾನ, ಚೋಫೈ, ನಹತ್, ಎಲೀಯಾಬ್, ಯೆರೋಹಾಮ್, ಎಲ್ಕಾನ ಹಾಗು ಸಮುವೇಲ.


ಯೆಹೂದದ ಅರಸ ಹಿಜ್ಕೀಯನ ಕಾಲದಲ್ಲಿ ಮೇಲೆ ನಮೂದಿಸಿದ ಪುರುಷರು ಅಲ್ಲಿ ವಾಸಿಸುತ್ತಿದ್ದ ಹಾಮ್ಯರನ್ನೂ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮ ಮಾಡಿದರು. ತಮ್ಮ ಆಡುಕುರಿಗಳಿಗಾಗಿ ಧಾರಾಳವಾಗಿ ಹುಲ್ಲುಗಾವಲುಗಳಿದ್ದುದರಿಂದ ಅಲ್ಲಿಯೇ ಸ್ಥಿರವಾಗಿ ನೆಲೆಸಿದರು.


ಅವರು ವೈರಿಗಳಿಂದ ಐವತ್ತು ಸಾವಿರ ಒಂಟೆಗಳನ್ನೂ ಎರಡು ಲಕ್ಷ ಐವತ್ತು ಸಾವಿರ ಕುರಿಗಳನ್ನೂ ಎರಡು ಸಾವಿರ ಕತ್ತೆಗಳನ್ನೂ ವಶಪಡಿಸಿಕೊಂಡರಲ್ಲದೆ, ಒಂದು ಲಕ್ಷ ಜನರನ್ನು ಯುದ್ಧಕೈದಿಗಳನ್ನಾಗಿ ಸೆರೆಹಿಡಿದರು.


ಗಾದನು ಗುರಿಯಾಗುವನು ಸುಲಿಗೆಗಾರರಾಕ್ರಮಣಕೆ ಓಡುವನಾ ದರೋಡೆಗಾರರನ್ನು ಹಿಮ್ಮೆಟ್ಟಿಕೊಂಡೇ.


ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.


ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು