Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:31 - ಕನ್ನಡ ಸತ್ಯವೇದವು C.L. Bible (BSI)

31 ಮಂಜೂಷವನ್ನು ಜೆರುಸಲೇಮಿಗೆ ತಂದ ತರುವಾಯ ಆರಾಧನಾವಿಧಿಗಾಗಿ ಅರಸ ದಾವೀದನು ಸಂಗೀತಮಂಡಲಿಯನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇವಿುಸಲ್ಪಟ್ಟವರ ಪಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವದರ್ಶನಗುಡಾರದ ಮಹಾಪವಿತ್ರಸ್ಥಳದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಟ್ಟ ಬಳಿಕ ಅರಸನಾದ ದಾವೀದನು ಗಾಯಕರನ್ನು ಆರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮಂಜೂಷವನ್ನು ನೆಲೆಗೊಳಿಸಿದ ತರುವಾಯ ದಾವೀದನು ಯೆಹೋವ ದೇವರ ಮನೆಯಲ್ಲಿ ವಾದ್ಯಗಾರರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:31
16 ತಿಳಿವುಗಳ ಹೋಲಿಕೆ  

ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.


“ಎಂದೆಂದಿಗು ಇದೇ ನನ್ನ ನಿವಾಸ I ಇರುವೆನಿಲ್ಲೇ, ಇದು ನನ್ನ ಅಭಿಲಾಶ II


ಆಗಮಿಸು ಪ್ರಭು, ನಿನ್ನ ತೇಜೋ ಮಂಜೂಷದೊಡನೆ I ನಿನ್ನಾ ವಾಸಸ್ಥಾನವನು ಬಂದು ಸೇರು ಬೇಗನೆ II


ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.


ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರವಸ್ತುಗಳನ್ನು ಹೊತ್ತರು.


ಶಿಮ್ಮಾ, ಹಗ್ಗೀಯ ಮತ್ತು ಅಸಾಯ ಎಂಬವರು.


ಅರಸ ಸೊಲೊಮೋನ ದೇವಾಲಯವನ್ನು ಕಟ್ಟಿಸುವುದಕ್ಕಿಂತ ಪೂರ್ವದಲ್ಲಿ ಅವರು ಸರ್ವೇಶ್ವರನ ದರ್ಶನದ ಡೇರೆಯ ಬಳಿಯಲ್ಲಿ ಕ್ರಮಪ್ರಕಾರ ಅನುದಿನವೂ ಕಾರ್ಯ ನಿರ್ವಹಿಸಿದರು.


ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.


ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು.


ದಾವೀದನು, ಮಂಜೂಷ ಹೊತ್ತವರು, ವಾದ್ಯ ಬಾರಿಸುವವರು ಹಾಗು ಅವರ ನಾಯಕ ಕೆನನ್ಯನು ಅತ್ಯುತ್ತಮ ನೂಲಿನಿಂದ ತಯಾರಿಸಿದ ನಿಲುವಂಗಿಗಳನ್ನು ಧರಿಸಿದ್ದರು. ದಾವೀದನು ಏಫೋದನ್ನು ಕೂಡ ಧರಿಸಿಕೊಂಡಿದ್ದನು.


ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,


ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು