Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:32 - ಕನ್ನಡ ಸತ್ಯವೇದವು C.L. Bible (BSI)

32 ಅರಸ ಸೊಲೊಮೋನ ದೇವಾಲಯವನ್ನು ಕಟ್ಟಿಸುವುದಕ್ಕಿಂತ ಪೂರ್ವದಲ್ಲಿ ಅವರು ಸರ್ವೇಶ್ವರನ ದರ್ಶನದ ಡೇರೆಯ ಬಳಿಯಲ್ಲಿ ಕ್ರಮಪ್ರಕಾರ ಅನುದಿನವೂ ಕಾರ್ಯ ನಿರ್ವಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸೊಲೊಮೋನನು ಯೆರೂಸಲೇವಿುನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯಸೇವೆಯನ್ನು ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಪವಿತ್ರ ಗುಡಾರದಲ್ಲಿ ಹಾಡುವುದೇ ಇವರ ದೇವರ ಸೇವೆಯಾಗಿತ್ತು. ಸೊಲೊಮೋನನು ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ತನಕ ಇವರು ಗುಡಾರದಲ್ಲಿ ತಮಗೆ ಹೇಳಿರುವ ಪ್ರಕಾರವೇ ಸೇವೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟುವವರೆಗೆ, ಈ ವಾದ್ಯಗಾರರು ಸಭೆಯ ಗುಡಾರದ ನಿವಾಸದ ಮುಂದೆ ಸೇವಿಸುತ್ತಾ ಇದ್ದರು. ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:32
20 ತಿಳಿವುಗಳ ಹೋಲಿಕೆ  

ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು.


ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್ ಹಾಗು ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದುದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣ ಇರಲಿಲ್ಲ.


ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.


ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.


ಜೆರುಸಲೇಮಿನಲ್ಲಿ ಅರಸ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಸೇವೆಮಾಡಿದವರು: ಅಜರ್ಯ,


ಮಂಜೂಷವನ್ನು ಜೆರುಸಲೇಮಿಗೆ ತಂದ ತರುವಾಯ ಆರಾಧನಾವಿಧಿಗಾಗಿ ಅರಸ ದಾವೀದನು ಸಂಗೀತಮಂಡಲಿಯನ್ನು ನೇಮಿಸಿದನು.


ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,


ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು