Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:60 - ಕನ್ನಡ ಸತ್ಯವೇದವು C.L. Bible (BSI)

60 ಬೆನ್ಯಾಮೀನ್ಯರ ಪ್ರದೇಶದಲ್ಲಿ ಫಲವತ್ತಾದ ಪ್ರದೇಶಗಳನ್ನು ಒಳಗೊಂಡ ಪಟ್ಟಣಗಳು ಅಂದರೆ ಗೆಬ, ಅಲೆಮೆತ್, ಅನಾತೋತ್ ಈ ಪಟ್ಟಣಗಳನ್ನು ಅವರಿಗೆ ಕೊಡಲಾಗಿತ್ತು. ಅವರೆಲ್ಲರ ಕುಟುಂಬಗಳ ವಾಸಕ್ಕಾಗಿ ಒಟ್ಟು ಹದಿಮೂರು ಪಟ್ಟಣಗಳು ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಬೆನ್ಯಾಮೀನ್ ಕುಲದಿಂದ ಗೆಬ, ಆಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಪಟ್ಟಣಗಳು ಹದಿಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:60
12 ತಿಳಿವುಗಳ ಹೋಲಿಕೆ  

ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.


ಆಗ ಯೆರೆಮೀಯನು ಬೆನ್ಯಾಮೀನ್ ನಾಡಿನಲ್ಲಿ ತನಗೆ ಬರಬೇಕಾಗಿದ್ದ ಸೊತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಜೆರುಸಲೇಮಿನಿಂದ ಅಲ್ಲಿಗೆ ಹೊರಟನು.


ದಂಡನೆಯ ಕಾಲವನ್ನು ಗೊತ್ತುಮಾಡಿರುವೆನು. ಅದು ಬಂದಾಗ ಅವರಲ್ಲಿ ಯಾರೂ ಉಳಿಯರು. ಇದು ನನ್ನ ತೀರ್ಮಾನ,” ಎಂದರು.


ಗಲ್ಲೀಮ್ ಗ್ರಾಮಸ್ಥರೇ, ಕೂಗಿ ಕಿರಿಚಿಕೊಳ್ಳಿ. ಲಯೇಷದ ಜನರೇ, ಕಿವಿಗೊಡಿರಿ. ಅನಾತೋತಿನ ಜನರೇ, ಪ್ರತ್ಯುತ್ತರ ಕೊಡಿ.


ಏಹೂದನ ಸಂತಾನದವರು - ನಾಮಾನ್, ಅಹೀಯ, ಗೇರ ಎಂಬವರು. ಅವರು ಗೇಬದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು. ಆದರೆ ಅವರು ಹೊರಗೆ ಹೋಗುವಂತೆ ಒತ್ತಾಯಿಸಲ್ಪಟ್ಟಾಗ ಮಾನಹತಿಯಲ್ಲಿ ವಾಸಿಸಲು ಹೋದರು. ಹೀಗೆ ಹೊರಡುವಾಗ ಉಚ್ಚ ಮತ್ತು ಅಹೀಹೂದನ ತಂದೆ ಗೇರ ಮುಂದಾಳಾಗಿದ್ದರು.


ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ


ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.


ಪಶ್ಚಿಮದಲ್ಲಿ ಮನಸ್ಸೆ ಪ್ರದೇಶದಲ್ಲಿದ್ದ ಹತ್ತು ಪಟ್ಟಣಗಳು ಕೇಹಾತನ ಗೋತ್ರದಲ್ಲಿದ್ದ ಉಳಿದವರಿಗೆ ಕುಟುಂಬ ಕುಟುಂಬವಾಗಿ ಚೀಟುಹಾಕಿ ಕೊಡಲಾಯಿತು.


ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು. ಇವುಗಳಿಂದ ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು