Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:8 - ಕನ್ನಡ ಸತ್ಯವೇದವು C.L. Bible (BSI)

8 ಚಾದೋಕ, ಅಹೀಮಾಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಹೀಟೂಬನ ಮಗ ಚಾದೋಕ. ಚಾದೋಕನ ಮಗ ಅಹೀಮಾಚ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಹೀಟೂಬನು ಚಾದೋಕನನ್ನು ಪಡೆದನು, ಚಾದೋಕನು ಅಹೀಮಾಚನನ್ನು ಪಡೆದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:8
19 ತಿಳಿವುಗಳ ಹೋಲಿಕೆ  

ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.


ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನೂ ಕೆರೇತ್ಯ-ಪೆಲೇತ್ಯರನ್ನೂ ಅರಸರು ಅವನ ಜೊತೆಯಲ್ಲಿ ಕಳುಹಿಸಿದ್ದಾರೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಶೆವನು ಕಾರ್ಯದರ್ಶಿ, ಚಾದೋಕ್ ಹಾಗು ಎಬ್ಯಾತಾರರು ಯಾಜಕರು;


ಚಾದೋಕನ ಮಗ ಅಹೀಮಾಚನು ಪುನಃ ಯೋವಾಬನಿಗೆ, “ಆಗುವುದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಿ,” ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು, “ಮಗೂ, ಏಕೆ ಹೋಗಬೇಕೆನ್ನುತ್ತಿ? ಅದಕ್ಕಾಗಿ ನಿನಗೆ ಬಹುಮಾನವೇನೂ ಸಿಕ್ಕುವುದಿಲ್ಲ,” ಎಂದನು.


ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.


ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ್ ಮತ್ತು ಯೋನಾತಾನರೆಲ್ಲಿ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆ, ” ಅವರು ಹಳ್ಳದಾಟಿ ಹೋಗಿಬಿಟ್ಟರು,” ಎಂದು ಉತ್ತರಕೊಟ್ಟಳು. ಸೇವಕರು ಅವರನ್ನು ಹುಡುಕುವುದಕ್ಕೆ ಹೋಗಿ ಕಾಣದೆ ಜೆರುಸಲೇಮಿಗೆ ಹಿಂದಿರುಗಿದರು.


ಯೋನಾತಾನ್ ಹಾಗು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿ ಎಲ್ಲಾ ವರ್ತಮಾನಗಳನ್ನು ಇವರಿಗೂ ಇವರ ಅರಸ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಗೆ ಬರಲಿಲ್ಲ.


ತರುವಾಯ ಹೂಷೈಯು, ಯಾಜಕರಾದ ಚಾದೋಕ ಹಾಗು ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು; ನಾನು ಹೀಗೆ ಹೇಳಿದೆ.


ಪರಾಕ್ರಮಶಾಲಿಯಾದ ಯುವಕ ಚಾದೋಕ ಮತ್ತು ಅವನ ಬಂಧುಗಳಾದ 22 ಮಂದಿ ಅಧಿಪತಿಗಳು;


ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರದಿಯ ಮೇಲೆ ಸೇವೆ ಸಲ್ಲಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದ್ದರು.


ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು