Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:21 - ಕನ್ನಡ ಸತ್ಯವೇದವು C.L. Bible (BSI)

21 ಜಾಬಾದ್, ಶೂತೆಲಹ ಎಂಬವರು. ಶೂತೆಲಹನಲ್ಲದೆ ಎಫ್ರಯಿಮನಿಗೆ ಎಜೆರ್, ಎಲ್ಲಾದ್ ಎಂಬಿಬ್ಬರು ಮಕ್ಕಳಿದ್ದರು. ಇವರು ಗತ್‍ನ ಮೂಲನಿವಾಸಿಗಳ ದನಗಳನ್ನು ಕದಿಯಲು ಪ್ರಯತ್ನಿಸಿದಾಗ ಕೊಲೆಗೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವನ ಮಗನು ಜಾಬಾದ್; ಇವನ ಮಕ್ಕಳು - ಶೂತೆಲಹ, ಎಜೆರ್, ಎಲ್ಲಾದ್ ಎಂಬವರು. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದದರಿಂದ ಆ ದೇಶದ ಮೂಲನಿವಾಸಿಗಳು ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಮಗನು ಜಾಬಾದ್; ಅವನ ಮಗನು ಶೂತೆಲಹ, ಏಜೆರ್, ಎಲಿಯಾದ್. ಆ ದೇಶದಲ್ಲಿ ಹುಟ್ಟಿದ ಗತ್‌ನವರು ಇವರ ಪಶುಗಳನ್ನು ಹಿಡಿದುಕೊಳ್ಳಲು ಇಳಿದು ಬಂದಾಗ, ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:21
6 ತಿಳಿವುಗಳ ಹೋಲಿಕೆ  

ಎಫ್ರಯಿಮನ ಸಂತಾನದವರು: ಶೂತೆಲಹ, ಬೆರೆದ್, ತಹತ್, ಎಲ್ಲಾದ, ತಹತ್,


ಇವರ ತಂದೆ ಎಫ್ರಯಿಮ್ ಅನೇಕ ದಿನಗಳವರೆಗೆ ಇವರಿಗಾಗಿ ಶೋಕಿಸಿದನು. ಅವನ ಸಹೋದರರು ಬಂದು ಅವನಿಗೆ ಸಂತಾಪ ಸೂಚಿಸಿದರು.


ಫಿಲಿಷ್ಟಿಯದ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ವಿಚಾರಿಸಿದರು. ಅವರು ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಹಾಗೆಯೇ ಇಸ್ರಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಫಿಲಿಷ್ಟಿಯರು ಜುದೇಯಕ್ಕೆ ಪ್ರತೀಕಾರ ಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿ ತೀರಿಸುತ್ತಾ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು