Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:29 - ಕನ್ನಡ ಸತ್ಯವೇದವು C.L. Bible (BSI)

29 ಮನಸ್ಸೆಯ ಸಂತಾನದವರು ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಗ್ರಾಮಗಳನ್ನೂ ತಮ್ಮ ವಶದಲ್ಲಿಟ್ಟುಕೊಂಡಿದ್ದರು. ಯಕೋಬನ ಮಗ ಜೋಸೆಫನ ಸಂತತಿಯವರು ಈ ಎಲ್ಲಾ ಪ್ರದೇಶಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮನಸ್ಸೆಯ ಗಡಿಗೆ ಸಮೀಪದಲ್ಲಿದ್ದ ಊರುಗಳಾದ ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಮತ್ತು ಅದರ ಹತ್ತಿರದಲ್ಲಿದ್ದ ಸಣ್ಣ ಊರುಗಳು. ಯೋಸೇಫನ ಸಂತತಿಯವರು ಈ ಊರುಗಳಲ್ಲಿ ವಾಸವಾಗಿದ್ದರು. ಯೋಸೇಫನು ಇಸ್ರೇಲನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಗಾಜವೂ, ಮನಸ್ಸೆಯ ಸಂತಾನದವರ ಮೇರೆಯಲ್ಲಿರುವ ಬೇತ್ ಷೆಯಾನೂ, ತಾನಕವೂ, ಮೆಗಿದ್ದೋ, ದೋರ್ ಮತ್ತು ಇವುಗಳ ಗ್ರಾಮಗಳು ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:29
12 ತಿಳಿವುಗಳ ಹೋಲಿಕೆ  

ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.


ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.


ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.


ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು