Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:20 - ಕನ್ನಡ ಸತ್ಯವೇದವು C.L. Bible (BSI)

20 ಎಲ್ಲಾಜಾರನ ಮಗ ಫೀನೆಹಾಸ ದ್ವಾರಪಾಲಕರ ಮೇಲ್ವಿಚಾರಕನಾಗಿದ್ದನು. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು; ಯೆಹೋವನು ಇವನ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಲಿಯಾಜರನ ಮಗನಾದ ಫೀನೆಹಾಸನು ಮುಂಚೆ ಅವರ ಮೇಲೆ ಅಧಿಕಾರಿಯಾಗಿದ್ದನು. ಯೆಹೋವ ದೇವರು ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:20
13 ತಿಳಿವುಗಳ ಹೋಲಿಕೆ  

ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.


ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗ ಈತಮಾರನ ಕೈಕೆಳಗೆ ಇದನ್ನೆಲ್ಲಾ ಮಾಡಬೇಕು.”


ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕರ್ತವ್ಯ ಇದೇ. ಮಹಾಯಾಜಕ ಆರೋನನ ಮಗ ಈತಾಮಾರನು ಅವರ ಮೇಲ್ವಿಚಾರಣೆಯನ್ನು ಮಾಡಬೇಕು


ಮಹಾಯಾಜಕ ಆರೋನನ ಮಗ ಎಲ್ಲಾಜಾರನು ದೀಪದ ಎಣ್ಣೆಯನ್ನು, ಪರಿಮಳ ಧೂಪವನ್ನು, ಅನುದಿನ ನೈವೇದ್ಯ ಮಾಡುವ ಧಾನ್ಯದ್ರವ್ಯಗಳನ್ನು ಹಾಗೂ ಅಭಿಷೇಕ ತೈಲವನ್ನು ತನ್ನ ವಶದಲ್ಲೇ ಇಟ್ಟುಕೊಳ್ಳಬೇಕು. ದೇವದರ್ಶನದ ಗುಡಾರದ ಎಲ್ಲ ಭಾಗಗಳು, ಅದರಲ್ಲಿರುವ ಸಮಸ್ತ ವಸ್ತುಗಳು ಪಾತ್ರೆಪರಿಕರಗಳು ಹಾಗೂ ಅವುಗಳಲ್ಲಿರುವುದೆಲ್ಲವೂ ಅವನ ಮೇಲ್ವಿಚಾರಣೆಯಲ್ಲಿರಬೇಕು.


ಇದಲ್ಲದೆ ಮಹಾಯಾಜಕ ಆರೋನನ ಮಗ ಎಲ್ಲಾಜಾರನು ಲೇವಿಯರ ಮುಖ್ಯಸ್ಥರಿಗೆ ಅಧ್ಯಕ್ಷನಾಗಿದ್ದ; ದೇವಸ್ಥಾನವನ್ನು ಕಾಯುವವರಿಗೆ ಮೇಲ್ವಿಚಾರಕನಾಗಿದ್ದ.


ಕೋರೇಯನ ಮಗನೂ ಎಬ್ಯಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನು ಹಾಗೂ ಕೋರಹನ ಗೋತ್ರದ ಸದಸ್ಯರು, ದೇವದರ್ಶನದ ಗುಡಾರದ ದ್ವಾರವನ್ನು ಕಾಯುವ ಜವಬ್ದಾರಿ ವಹಿಸಿಕೊಂಡು ಇದ್ದರು.ಅವರ ಪೂರ್ವಜರು ಸಹ ಸರ್ವೇಶ್ವರನ ಗುಡಾರವನ್ನು ಕಾಯುವವರಾಗಿದ್ದರು.


ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.


ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಯಾಜಕ ಎಲ್ಲಾಜಾರನ ಮಗ ಫೀನೆಹಾಸನನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು