Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:22 - ಕನ್ನಡ ಸತ್ಯವೇದವು C.L. Bible (BSI)

22 ಒಟ್ಟು ಇನ್ನೂರ ಹನ್ನೆರಡು ಮಂದಿ, ದ್ವಾರಪಾಲಕರಾಗಿ ನೇಮಕಗೊಂಡಿದ್ದರು. ಅವರು ನೆಲೆಸಿದ್ದ ಗ್ರಾಮಗಳಲ್ಲಿ ಅವರ ಹೆಸರುಗಳು ದಾಖಲಾಗಿದ್ದವು. ಈ ಜವಾಬ್ದಾರಿಯ ಸ್ಥಾನಗಳಿಗೆ ಅವರ ಪೂರ್ವಜರನ್ನು ನೇಮಿಸಿದವರು ಅರಸ ದಾವೀದನು ಮತ್ತು ಪ್ರವಾದಿ ಸಮುವೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಮಂದಿ; ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಗಳಲ್ಲಿ ಲಿಖಿತವಾಗಿದ್ದವು. ದಾವೀದನೂ ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೋಗಕ್ಕೆ ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಾಗಿಲುಗಳಲ್ಲಿ ದ್ವಾರಪಾಲಕರಾಗಿರಲು ಆಯ್ಕೆಯಾದ ಇವರೆಲ್ಲರು 212 ಮಂದಿಯಾಗಿದ್ದರು. ಇವರು ಹೆಸರುಗಳು ಅವರವರ ಗ್ರಾಮಗಳಲ್ಲಿ ಅವರ ವಂಶಾವಳಿಯ ಪ್ರಕಾರ ಲಿಖಿತವಾಗಿದ್ದವು. ಇವರು ನಂಬಿಗಸ್ತರಾದ್ದರಿಂದ ದಾವೀದನೂ, ದರ್ಶಿಯಾದ ಸಮುಯೇಲನೂ ಇವರನ್ನು ಜವಾಬ್ದಾರಿಯ ಸ್ಥಾನಗಳಿಗೆ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:22
18 ತಿಳಿವುಗಳ ಹೋಲಿಕೆ  

(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)


ಯಾಜಕರ ಮತ್ತು ಲೇವಿಯರ ವರ್ಗಗಳು, ಸರ್ವೇಶ್ವರನ ಆಲಯದಲ್ಲಿ ನಡೆಯ ತಕ್ಕ ಎಲ್ಲಾ ಆರಾಧನೆ,


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರಲ್ಲಿ, ಕೆಲವರು ಬೆನ್ಯಾಮೀನ್ಯರಲ್ಲಿ, ವಾಸಿಸುತ್ತಿದ್ದರು.


ಅವರವರ ಹೆಂಡತಿಯರು, ಗಂಡು-ಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನೇ ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)


ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸಮಾಡದೆ, ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು.


ಕೋರಹಿಯ ಗೋತ್ರದ ಶಲ್ಲೂಮನ ಚೊಚ್ಚಲು ಮಗ ಮತ್ತಿತ್ಯ ಎಂಬ ಲೇವಿಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನಾಗಿದ್ದನು.


ಅವರ ವಂಶಜರು ದೇವಾಲಯದ ದ್ವಾರಪಾಲಕರಾಗಿ ಸೇವೆ ಮುಂದುವರೆಸಿಕೊಂಡು ಬಂದರು.


ಯಾವ ವಿಧದಲ್ಲಾದರೂ ಅಶುದ್ಧನಾದವನು ಸರ್ವೇಶ್ವರನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು