Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:31 - ಕನ್ನಡ ಸತ್ಯವೇದವು C.L. Bible (BSI)

31 ಕೋರಹಿಯ ಗೋತ್ರದ ಶಲ್ಲೂಮನ ಚೊಚ್ಚಲು ಮಗ ಮತ್ತಿತ್ಯ ಎಂಬ ಲೇವಿಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ರೊಟ್ಟಿಸುಡುವ ಕೆಲಸದ ಮೇಲ್ವಿಚಾರಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:31
10 ತಿಳಿವುಗಳ ಹೋಲಿಕೆ  

ಕೋರೇಯನ ಮಗನೂ ಎಬ್ಯಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನು ಹಾಗೂ ಕೋರಹನ ಗೋತ್ರದ ಸದಸ್ಯರು, ದೇವದರ್ಶನದ ಗುಡಾರದ ದ್ವಾರವನ್ನು ಕಾಯುವ ಜವಬ್ದಾರಿ ವಹಿಸಿಕೊಂಡು ಇದ್ದರು.ಅವರ ಪೂರ್ವಜರು ಸಹ ಸರ್ವೇಶ್ವರನ ಗುಡಾರವನ್ನು ಕಾಯುವವರಾಗಿದ್ದರು.


ಒಟ್ಟು ಇನ್ನೂರ ಹನ್ನೆರಡು ಮಂದಿ, ದ್ವಾರಪಾಲಕರಾಗಿ ನೇಮಕಗೊಂಡಿದ್ದರು. ಅವರು ನೆಲೆಸಿದ್ದ ಗ್ರಾಮಗಳಲ್ಲಿ ಅವರ ಹೆಸರುಗಳು ದಾಖಲಾಗಿದ್ದವು. ಈ ಜವಾಬ್ದಾರಿಯ ಸ್ಥಾನಗಳಿಗೆ ಅವರ ಪೂರ್ವಜರನ್ನು ನೇಮಿಸಿದವರು ಅರಸ ದಾವೀದನು ಮತ್ತು ಪ್ರವಾದಿ ಸಮುವೇಲನು.


ನಾಲ್ಕು ಜನ ಮುಖ್ಯ ದ್ವಾರಪಾಲಕರು ಲೇವಿಯರಾಗಿದ್ದು ಅವರಿಗೆ ಅಂತಿಮ ಜವಾಬ್ದಾರಿ ಕೊಡಲಾಗಿತ್ತು. ದೇವಾಲಯದ ಕೋಣೆಗಳನ್ನು ಹಾಗೂ ಭಂಡಾರಗಳನ್ನು ಅವರು ನೋಡಿಕೊಳ್ಳಬೇಕಾಗಿತ್ತು.


ಜೆರುಸಲೇಮಿನಲ್ಲಿ ನೆಲೆಸಿದ ದೇವಾಲಯದ ದ್ವಾರಪಾಲಕರು: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಎಂಬವರು. ಶಲ್ಲೂಮ್ ಅವರ ಮುಖ್ಯಸ್ಥನಾಗಿದ್ದನು.


ಕಬ್ಬಿಣದ ಹೆಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಸರ್ವೇಶ್ವರನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.


ನೀವು ಅರ್ಪಿಸುವುದು ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿ ಹಿಟ್ಟಿನದಾಗಿರಬೇಕು.


ನೀವು ಅರ್ಪಿಸುವುದು ಕಬ್ಬಿಣದ ಹೆಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿ ಹಿಟ್ಟಿನದಾಗಿರಬೇಕು.


ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.


ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;


“ಧಾನ್ಯನೈವೇದ್ಯದ ಬಗ್ಗೆ ನಿಯಮಗಳಿವು: ಆರೋನನ ವಂಶಜರು ನೈವೇದ್ಯ ದ್ರವ್ಯವನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಎದುರಿಗೇ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು