Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:8 - ಕನ್ನಡ ಸತ್ಯವೇದವು C.L. Bible (BSI)

8 ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8-9 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8-9 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕ್ರಿಸ್ತಾಕ್ ತುಮಿ ಬಗುಕನ್ಯಾಶಿ ಹೊಲ್ಯಾರ್ಬಿ ತುಮಿ ತೆಚೊ ಪ್ರೆಮ್ ಕರ್ತ್ಯಾಸಿ, ಅನಿ ಅತ್ತಾಬಿ ತೊ ತುಮ್ಕಾ ದಿಸಿನಾ ಹೊಲಾ ಹೊಲ್ಯಾರ್ಬಿ ತೆಚೆ ವರ್ತಿ ವಿಶ್ವಾಸ್ ಥವ್ನ್ ಮಹಿಮೆನ್ ಭರಲ್ಲ್ಯಾ ಸಾಂಗುಕ್ ಹೊಯ್ನಾ ತಸ್ಲ್ಯಾ ಕುಶಿನಿ ತುಮಿ ಭರ್ತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:8
37 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.


ನಾವು ನೋಡಿ ನಡೆಯುವವರಲ್ಲ, ನಂಬಿ ನಡೆಯುವವರು.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.


ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ.


ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ, ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಅಲ್ಲಿ ಅವನಿಗೆ ಕೇಳಿಬಂದ ವಿಷಯಗಳು ಮಾನವನ ವರ್ಣನೆಗೆ ಎಟುಕದವು. ಮಾನವನ ನುಡಿಗೆ ನಿಲುಕದವು.


ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತುತಿಸ್ತೋತ್ರ ಸಲ್ಲಲಿ!


ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


“ಬೇರೆಯವರ ಕಾಂತರಿಗಿಂತ ನಿನ್ನ ಕಾಂತನಲ್ಲಿ ಏನು ವಿಶೇಷ? ಬೇರೆಯವರ ಇನಿಯರಿಗಿಂತ ನಿನ್ನ ಕಾಂತನಲ್ಲಿ ಅದೇನು ಅತಿಶಯ? ಸ್ತ್ರೀರತ್ನವೇ, ಹೇಳು ನಮಗೆಂತು ಈ ಪ್ರಮಾಣ?” ನಲ್ಲೆ :


ನನ್ನ ಪ್ರಾಣಪ್ರಿಯನೇ ಹೇಳು: ನಿನ್ನ ಮಂದೆಯನ್ನು ನೀನು ಮೇಯಿಸುವುದೆಲ್ಲಿ? ನಡುಹಗಲಲ್ಲಿ ಅದು ವಿಶ್ರಮಿಸುವುದೆಲ್ಲಿ? ನಾನೇಕೆ ಅಲೆಯಬೇಕು ಮುಸುಕು ಹಾಕಿದವಳಂತೆ ನಿನ್ನ ಗೆಳೆಯರ ಮಂದೆಗಳ ಹಿಂದೆ? ನಲ್ಲ :


ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು