Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:1 - ಕನ್ನಡ ಸತ್ಯವೇದವು C.L. Bible (BSI)

1 ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತೆಚೆಸಾಟ್ನಿ ಸಗ್ಳ್ಯಾ ರಿತಿಚೆ ಬುರ್ಶೆಪಾನ್, ಹಾಟ್ಮಾರಿಪಾನ್, ಕುಶ್ಡೆಪಾನ್ ಇರ್ಸ್ಯಾ, ಢೊಂಗ್ ಅನಿ ಸಗ್ಳ್ಯಾ ರಿತಿಚೆ ವಾಯ್ಟ್ ಬೊಲ್ನೆ ಸೊಡುನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:1
50 ತಿಳಿವುಗಳ ಹೋಲಿಕೆ  

ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


“ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ.


ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.


ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು, ಅವರು ಚಾಡಿಹೇಳಬಾರದು; ಮದ್ಯಾಸಕ್ತರಾಗಿರಬಾರದು;ಸದ್ಬೋಧಕಿಯರಾಗಿರಬೇಕೆಂದು ವಿಧಿಸು.


ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.


ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.


ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”


ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ. ಅವರ ಒಡನಾಟವನ್ನು ಬಯಸಬೇಡ.


ಹಿಂಸಾತ್ಮಕನನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ, ಅವನ ನಡತೆಯನ್ನು ಎಷ್ಟುಮಾತ್ರಕ್ಕೂ ಅನುಸರಿಸಬೇಡ.


ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.


ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.


ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ಕೆಡುಕರನ್ನು ಕಂಡು ಉರಿಗೊಳ್ಳಬೇಡ; ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ.


ಶಾಂತಗುಣವು ದೇಹಕ್ಕೆ ಆರೋಗ್ಯದಾಯಕವು; ಹೊಟ್ಟೆಕಿಚ್ಚು ಎಲುಬಿಗೆ ಕ್ಷಯ ರೋಗವು.


ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು.


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.


ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು