Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:21 - ಕನ್ನಡ ಸತ್ಯವೇದವು C.L. Bible (BSI)

21 ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾ ಸಾಟ್ನಿ ಬಲ್ವುನ್ ಹೊಲಾ ಕ್ರಿಸ್ತಾನ್ ಬಿ ತುಮ್ಚ್ಯಾ ಸಾಟ್ನಿ ಕಸ್ಟ್ ಹೊವ್ನ್ ಹಾಯ್ ತೆಚ್ಯಾ ಸಾಟ್ನಿ ತುಮಿ ತೆಚ್ಯಾ ಸಾರ್ಕೆ ಚಲುಚೆ ಕ್ರಿಸ್ತಾಚ್ಯಾ ಸಾರ್ಕೆಚ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:21
30 ತಿಳಿವುಗಳ ಹೋಲಿಕೆ  

ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನಾನು ನಿಮಗೆ ಒಂದು ಆದರ್ಶವನ್ನು ಕೊಟ್ಟಿದ್ದೇನೆ. ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ನಾನು ಕ್ರಿಸ್ತಯೇಸುವನ್ನು ಅನುಸರಿಸುವಂತೆ, ನೀವೂ ನನ್ನನ್ನೂ ಅನುಸರಿಸಿರಿ.


ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.


ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ:


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ.


ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II


ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.


ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.


ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ.


ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು