Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:7 - ಕನ್ನಡ ಸತ್ಯವೇದವು C.L. Bible (BSI)

7 ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ನಂಬುವವರಾದ ನಿಮಗೇ ಈ ಮಾನವುಂಟು. ನಂಬದೆಯಿರುವವರಿಗೋ - ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಂಬಿಕೆಯುಳ್ಳ ಜನರಾದ ನಿಮಗೆ ಆ ಕಲ್ಲು (ಯೇಸು) ಹೆಚ್ಚು ಬೆಲೆಯುಳ್ಳದ್ದು. ಆದರೆ ನಂಬದ ಜನರಿಗೆ ಆತನು ಇಂತೆಂದಿದ್ದಾನೆ: “ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಮನುನ್ ವಿಶ್ವಾಸ್ ಥವ್ತಲ್ಲ್ಯಾ ತುಮ್ಕಾ ತೊ ಎಕ್ ಕಿಮ್ತಿಚೊ ಗುಂಡೊ ಹೊವ್ನ್ ಹಾಯ್, ಖರೆ ವಿಶ್ವಾಸ್ ಕರಿನಸಲ್ಲ್ಯಾಂಚ್ಯಾ ಸಾಟ್ನಿ “ಬಾಂದ್ಪ್ಯಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊ ಮುಲ್ಲ್ಯಾತ್ಲೊ ಲೈ ಗರ್ಜೆಚೊ ಗುಂಡೊ ಹೊಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:7
26 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ವಿಶ್ವಾಸವಿದ್ದುದರಿಂದಲೇ ರಹಾಬಳೆಂಬ ಜಾರಿಣಿ ಇಸ್ರಯೇಲ್ ಗೂಢಚಾರರಿಗೆ ಸೌಹಾರ್ದತೆಯಿಂದ ಆಶ್ರಯ ನೀಡಿ, ಅವಿಶ್ವಾಸಿಗಳೊಡನೆ ನಾಶವಾಗದೆ ಉಳಿದಳು.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಸಕಲ ಆಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ.


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.


ಆದರೆ ಇಸ್ರಯೇಲರನ್ನು ಕುರಿತು: “ಅವಿಧೇಯರೂ ಪ್ರತಿಭಟಿಸುವವರೂ ಆದ ಈ ಜನಾಂಗವನ್ನು ದಿನವೆಲ್ಲಾ ನಾನು ಕೈಚಾಚಿ ಕರೆದೆ,” ಎಂದು ಪ್ರವಾದಿಸಿದ್ದಾನೆ.


“ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.


ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.


ಇದನ್ನು ಜನರು ಕೇಳಿದ್ದೇ, “ಅಯ್ಯೋ, ಹಾಗೆ ಎಂದಿಗೂ ಸಂಭವಿಸದಿರಲಿ!” ಎಂದರು. ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ; ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.’ ಎಂದು ಪವಿತ್ರಗ್ರಂಥದಲ್ಲಿ ಹೇಳಿರುವುದರ ಅರ್ಥ ಆದರೂ ಏನು?


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು