Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:17 - ಕನ್ನಡ ಸತ್ಯವೇದವು C.L. Bible (BSI)

17 ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್, ವಾಯ್ಟ್ ಕರ್ತಲ್ಲ್ಯಾಚ್ಯಾನ್ಕಿ ದೆವಾಚಿ ಇಚ್ಚ್ಯಾ ಹೊಯ್ ಹೊಲ್ಲ್ಯಾರ್ ಬರೆ ಕರ್ತಲ್ಯಾಸಾಟ್ನಿ ಕಸ್ಟ್ ಸೊಸ್ತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:17
10 ತಿಳಿವುಗಳ ಹೋಲಿಕೆ  

ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.


ಪೌಲನು ಸಮ್ಮತಿಸುವುದಿಲ್ಲವೆಂದು ನಮಗೆ ಸ್ಪಷ್ಟವಾದಾಗ “ಪ್ರಭುವಿನ ಚಿತ್ತದಂತೆ ಆಗಲಿ,” ಎಂದು ಸುಮ್ಮನಾದೆವು.


ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”


ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.


ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.


ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.


ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು