Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:1 - ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಕ್ರಿಸ್ತ್ ಆಂಗಾ ಮಾಸಾನ್ ಹೊತ್ತ್ಯಾ ತನ್ನಾ ತೆನಿ ಕಸ್ಟ್ ಖಾಲ್ಯಾನ್ ತುಮಿಬಿ ತೆಚ್ಯಾ ಸಾರ್ಕೆಚ್ ಮನುನ್ ಯವ್ಜುನ್ ಘೆವ್ನ್ ತುಮ್ಕಾ ತುಮಿ ಘಟ್ಟ್ ಕರುನ್ಗೆವಾ, ಕಶ್ಯಾಕ್ ಮಟ್ಲ್ಯಾರ್, ಆಂಗಾ ಮಾಸಾನಿ ಕಸ್ಟ್ ಸೊಸ್ತಲೊ ಪಾಪಾತ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:1
17 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದೂ ಪರಿಗಣಿಸಿರಿ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆಹೊಂದಿದವನು.


ಎಂದೇ, ದೇವರು ಕೊಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮೆಟ್ಟದೆ ನಿಲ್ಲುತ್ತೀರಿ;


ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.


ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ:


ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ?


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿಪಡೆದಂತೆ ದೇವರ ವಿಶ್ರಾಂತಿಯನ್ನು ಪಡೆದವನು ಸಹ ತನ್ನ ಕೆಲಸಕಾರ್ಯಗಳನ್ನು ಮುಗಿಸಿ ವಿಶ್ರಾಂತಿಯನ್ನು ಪಡೆಯುತ್ತಾನೆ.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಬಹುಮಾನ ತರದಂತೆಮಾಡುವೆನು.


ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.


ಆದುದರಿಂದ ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕು,” ಎಂದು ಹೇಳಿದನು.


ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು